RNI NO. KARKAN/2006/27779|Monday, August 4, 2025
You are here: Home » breaking news » ಗೋಕಾಕ:ನಾಳೆ ನಗರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ: ಕೈ ಅಭ್ಯರ್ಥಿ ಲಖನ್ ಪರ ಪ್ರಚಾರ

ಗೋಕಾಕ:ನಾಳೆ ನಗರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ: ಕೈ ಅಭ್ಯರ್ಥಿ ಲಖನ್ ಪರ ಪ್ರಚಾರ 

ನಾಳೆ ನಗರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ: ಕೈ ಅಭ್ಯರ್ಥಿ ಲಖನ್ ಪರ ಪ್ರಚಾರ

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ನ 29 :

 

ದಿನಾಂಕ 30 ರಂದು ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3 ಘಂಟೆಗೆ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರ ಪರ ಹಮ್ಮಿಕೊಂಡ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ.
ಸಿದ್ದರಾಮಯ್ಯ ಅವರೊಂದಿಗೆ ಮಾಜಿ ಸಚಿವ ಹಾಗೂ ಶಾಸಕ ಸತೀಶ ಜಾರಕಿಹೊಳಿ , ಅಭ್ಯರ್ಥಿ ಲಖನ್ ಜಾರಕಿಹೊಳಿ , ಜಮಖಂಡಿ ಶಾಸಕ ಆನಂದ ನ್ಯಾಮಗೌಡ, ಮಾಜಿ ಮಂತ್ರಿ ವೀರಕುಮಾರ ಪಾಟೀಲ, ಧುರೀಣರಾದ ಎಸ್.ಜಿ ನಂಜಯನಮಠ, ಶಾಮ ಘಾಟಕೆ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಅನೇಕರು ಪಾಲ್ಗೋಳಲಿದ್ದು, ಕಾಂಗ್ರೆಸ್ ಕಾರ್ಯಕರ್ತರು ಮತದಾರ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಜಾಕೀರ ನಧಾಪ ಪ್ರಕಟನೆಯಲ್ಲಿ ತಿಳಿಸಿದ್ದಾರೆ

Related posts: