ಬೆಟಗೇರಿ:ಸ್ವಯಂ ಸೇವಕರಿಗೆ ಅಭಿನಂದನೆ ಪತ್ರ ವಿತರಣೆ
ಸ್ವಯಂ ಸೇವಕರಿಗೆ ಅಭಿನಂದನೆ ಪತ್ರ ವಿತರಣೆ
ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ಎ 13 :
ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಕರೊನಾ ವೈರಸ್ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸ್ಥಳೀಯರಲ್ಲಿ ಜಾಗೃತಿ ಮೂಡಿಸುತ್ತಿರುವ ಸ್ಥಳೀಯ ಸ್ವಯಂ ಸೇವಕರಿಗೆ ಅಭಿನಂದನೆ ಪತ್ರ ವಿತರಣೆ ಕಾರ್ಯಕ್ರಮ ಸೋಮವಾರ ಏ.13 ರಂದು ನಡೆಯಿತು.
ಗ್ರಾಮದಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸ್ಥಳೀಯರಲ್ಲಿ ಜಾಗೃತಿ ಮೂಡಿಸುತ್ತಿರುವ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಕರೋನಾ ಸೈನಿಕರು, ವೈದ್ಯಕೀಯ ವಿವಿಧ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಗ್ರಾಪಂ ಮತ್ತು ಪಿಎಚ್ಸಿ ಸಿಬ್ಬಂದಿ ಹಾಗೂ ಪೊಲೀಸ್ ಪೇದೆಗಳ ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೀಡಿದ ಅಭಿನಂದನೆ ಪತ್ರಗಳನ್ನು ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ, ಪಿಡಿಒ ಎಚ್.ಎನ್.ಬಾವಿಕಟ್ಟಿ ಅವರು ಸ್ಥಳೀಯ ಸ್ವಯಂ ಸೇವಕರಿಗೆ ವಿತರಿಸಿದರು.
ಪಿಎಚ್ಸಿ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ, ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರು ಕರೊನಾ ವೈರಸ್ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳ ಹಾಗೂ ಸ್ಥಳೀಯರಲ್ಲಿ ಇನ್ನಷ್ಟು ಜನ ಜಾಗೃತಿ ಮೂಡಿಸಲು ಪ್ರಯತ್ನಿಸಬೇಕೆಂದು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಕರೋನಾ ಸೈನಿಕರಿಗೆ ಸಲಹೆಗಳನ್ನು ಹೇಳಿದÀರು.
ಗ್ರಾಪಂ ಸದಸ್ಯ ಅಜ್ಜಪ್ಪ ಪೇದನ್ನವರ, ಮಲ್ಲಪ್ಪ ಪಣದಿ, ಬಸವರಾಜ ಪಣದಿ, ಶ್ರೀಧರ ದೇಯಣ್ಣವರ, ರಮೇಶ ಮುಧೋಳ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಕರೋನಾ ಸೈನಿಕರು, ಗ್ರಾಪಂ ಸದಸ್ಯರು, ಪಿಎಚ್ಸಿ ಸಿಬ್ಬಂದಿ, ಸ್ಥಳೀಯರು, ಮತ್ತೀತರರು ಇದ್ದರು.