RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ಕೊರೋನಾದಿಂದ ದೇಶವನ್ನು ಗಂಡಾಂತರದಿಂದ ಪಾರು ಮಾಡುವಲ್ಲಿ ಪ್ರಧಾನಿ ಮೋದಿ ಶ್ರಮಿಸುತ್ತಿದ್ದಾರೆ : ಸಚಿವ ರಮೇಶ

ಗೋಕಾಕ:ಕೊರೋನಾದಿಂದ ದೇಶವನ್ನು ಗಂಡಾಂತರದಿಂದ ಪಾರು ಮಾಡುವಲ್ಲಿ ಪ್ರಧಾನಿ ಮೋದಿ ಶ್ರಮಿಸುತ್ತಿದ್ದಾರೆ : ಸಚಿವ ರಮೇಶ 

ಕೊರೋನಾದಿಂದ ದೇಶವನ್ನು ಗಂಡಾಂತರದಿಂದ ಪಾರು ಮಾಡುವಲ್ಲಿ ಪ್ರಧಾನಿ ಮೋದಿ ಶ್ರಮಿಸುತ್ತಿದ್ದಾರೆ : ಸಚಿವ ರಮೇಶ

 

 

ನಮ್ಮ ಬೆಳಗಾವಿ ಇ – ವಾರ್ತೆ ,ಗೋಕಾಕ ಜೂ 14 :

 

ಕೊರೋನಾ ಮಹಾಮಾರಿಯಿಂದಾಗಿ ಇಡೀ ಜಗತ್ತು ಸಂಕಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾಗ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಲಾಕ್‍ಡೌನ್ ಎಂಬ ಗಟ್ಟಿ ನಿರ್ಧಾರವನ್ನು ತಾಳಿ ದೇಶವನ್ನು ಗಂಡಾಂತರದಿಂದ ಪಾರು ಮಾಡುವಲ್ಲಿ ಶ್ರಮಿಸುತ್ತಿದ್ದು ದೇಶದ ಜನತೆ ಪ್ರಧಾನಿ ಅವರನ್ನು ಕೊಂಡಾಡುತ್ತಿದ್ದಾರೆಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ರವಿವಾರದಂದು ನಗರದ ಸಮುದಾಯ ಭವನದಲ್ಲಿ ಗೋಕಾಕ ತಾಲೂಕಿನ ಸಹಕಾರ ಸಂಘಗಳು, ಸೌಹಾರ್ದ ಸಹಕಾರಿಗಳು ಮತ್ತು ಬೆಳಗಾವಿ ಹಾಲು ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಕೊರೋನಾ ವಾರಿಯರ್ಸ್ ಅಭಿನಂದನಾ ಪತ್ರ ಹಾಗೂ ಪ್ರೋತ್ಸಾಹಧನ ಚೆಕ್‍ಗಳನ್ನು ವಿತರಿಸಿ ಅವರು ಮಾತನಾಡಿದರು.
ಕೊರೋನಾ ವೈರಸ್‍ನ ಕರಾಳ ಛಾಯೆ ಎಲ್ಲೆಡೆ ಹರಡಿದ್ದರೂ ಕೂಡಾ ನಮ್ಮ ಪೋಲೀಸ ಇಲಾಖೆ, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ-ಆಶಾ ಕಾರ್ಯಕರ್ತೆಯ ಸಮಯೋಚಿತ ಕಾರ್ಯಗಳಿಂದ ಹತೋಟಿಗೆ ಬಂದಿದ್ದು, ಸೋಂಕು ತಗಲಿದವರು ಗುಣಮುಖರಾಗಿ ಹೊರಬರುತ್ತಿರುವುದು ಸಮಾಧಾನಕರ ಸಂಗತಿಯಾಗಿದೆ. ಕೊರೋನಾ ಹೋರಾಟದಲ್ಲಿ ಭಾರತಕ್ಕೆ ಜಯ ಖಂಡಿತ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸದಾ ಚಟುವಟಿಕೆಯಿಂದ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಕೊರೋನಾ ವೈರಸ್‍ನ ಬಿಕ್ಕಟ್ಟಿನ ಸಂದರ್ಭದಲ್ಲಿ ಎಂತಹ ಕಷ್ಟದ ಸಂದರ್ಭಗಳು ಎದುರುರಾದರೂ ಎದೆಗುಂದದೇ ತಮ್ಮ ಜೀವದ ಹಂಗು ತೊರೆದು ತಮಗೆ ನೀಡಿದ ಜವಾಬ್ದಾರಿಯನ್ನು ನಿರ್ವಹಿಸಿ ಸರ್ಕಾರಕ್ಕೆ ಸಕಾಲದಲ್ಲಿ ವರದಿಯನ್ನು ನೀಡಿರುವುದು ಅವರ ಮೇಲೆ ಸರ್ಕಾರದ ಗೌರವ ಇಮ್ಮಡಿಯಾಗಿದೆ. ಆಶಾ ಕಾರ್ಯಕರ್ತೆಯರಿಗೆ ಎಷ್ಟೇ ಕೃತಜ್ಞತೆಯನ್ನು ಸಲ್ಲಿಸಿದರೂ ಕಡಿಮೆಯಾಗಿದೆ ಎಂದು ತಿಳಿಸಿದ ಅವರು ಸರ್ಕಾರ ಹಾಗೂ ವೈಯಕ್ತಿಕವಾಗಿ ಅಭಿನಂದಿಸಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ತಿಳಿಸಿದರು.
ಕೊರೋನಾ ಸಂಕಷ್ಟವನ್ನು ಎದುರಿಸುವಲ್ಲಿ ಸಂಘ-ಸಂಸ್ಥೆಗಳ ಪಾತ್ರ ಮಹತ್ವದಾಗಿದ್ದು, ಬಾಲಚಂದ್ರ ಜಾರಕಿಹೊಳಿ ನೇತೃತ್ವದ ಕೆಎಮ್‍ಎಫ್ ಸಂಸ್ಥೆ ಸಹಾಯಕ್ಕೆ ಮುಂದೆ ಬಂದು ಉಚಿತವಾಗಿ ನಾಡಿನ ಜನತೆಗೆ ಹಾಲನ್ನು ಪೂರೈಸಿ, 6 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡಿದ್ದು ಶ್ಲಾಘನೀಯ ಕಾರ್ಯವಾಗಿದೆ ಎಂದು ಹೇಳಿದರು.
ವೇದಿಕೆ ಮೇಲೆ ಕರ್ನಾಟಕ ರಾಜ್ಯ ಸಹಕಾರಿ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಡಾ. ಸಂಜಯ ಹೊಸಮಠ, ನಿರ್ದೇಶಕ ತಮ್ಮಣ್ಣ ಕೆಂಚರೆಡ್ಡಿ, ಕೆಎಮ್‍ಎಫ್ ಬೆಳಗಾವಿ ನಿರ್ದೇಶಕರಾದ ಮಲ್ಲು ಪಾಟೀಲ, ಆರ್.ಕೆ.ಬಂಡಿ, ವ್ಯವಸ್ಥಾಪಕ ನಿರ್ದೇಶಕ ಯುಭೆಖಾನ, ಸಹಕಾರ ಸಂಘಗಳ ಜಂಟಿ ನಿಬಂಧಕ ಜಿ.ಎಮ್.ಪಾಟೀಲ, ಉಪನಿಬಂಧಕ ಕೆ.ಆಯ್.ಶ್ರೀನಿವಾಸ, ಸಹಾಯಕ ನಿಬಂಧಕ ಎನ್.ಎನ್.ಸರಾಫ, ಸಹಕಾರ ಅಭಿವೃದ್ದಿ ಅಧಿಕಾರಿ ಬಿ.ಕೆ.ಗೋಖಲೆ ಇದ್ದರು.
ಸಹಕಾರಿ ಸಂಘಗಳ ಹಿರಿಯ ನಿರೀಕ್ಷ ಎಸ್.ಬಿ.ಬಿರಾದಾರ ಪಾಟೀಲ ಸ್ವಾಗತಿಸಿ, ವಂದಿಸಿದರು.

Related posts: