ಗೋಕಾಕ:ಕಡಾಡಿ ಸಂಸತ್ತ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ : ಅಭಿಮಾನಿಗಳಿಂದ ಸಿಹಿ ಹಂಚಿ ಸಂಭ್ರಮ
ಕಡಾಡಿ ಸಂಸತ್ತ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ : ಅಭಿಮಾನಿಗಳಿಂದ ಸಿಹಿ ಹಂಚಿ ಸಂಭ್ರಮ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 21 :
ನೂತನ ರಾಜ್ಯಸಭಾ ಸದಸ್ಯರಾಗಿ ಇತ್ತೀಚೆಗೆ ಆಯ್ಕೆಗೊಂಡಿರುವ ಈರಣ್ಣ ಕಡಾಡಿ ಅವರು ನವದೆಹಲಿ ಸಂಸತ್ತ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕಲ್ಲೋಳಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯಲ್ಲಿ ಅವರ ಅಭಿಮಾನಿಗಳು ಬುಧವಾರಂದು ಸಿಹಿ ಹಂಚಿ ಸಂಭ್ರಮಿಸಿದರು
ಬೆಟಗೇರಿ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಈರಪ್ಪ ದೇಯಣ್ಣವರ ಮಾತನಾಡಿ, ನೂತನ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು ನವದೆಹಲಿ ಸಂಸತ್ತ ಭವನದಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದು, ಕನ್ನಡನಾಡಿನ ಗರಿಮೆ ಹೆಚ್ಚಿಸಿದ್ದಾರೆ ಎಂದರು. ಗ್ರಾಮದ ಶಾಖೆಯ ಸಲಹಾ ಸಮಿತಿ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಒಬ್ಬರಿಗೊಬ್ಬರೂ ಸಿಹಿ ವಿತರಿಸಿ ಸಂಭ್ರಮಿಸಿದರು.
ಸ್ಥಳೀಯ ಬಿಜೆಪಿ ಯುವಮುಖಂಡ ಈಶ್ವರ ಮುಧೋಳ, ಬಸಪ್ಪ ಗೌಡರ, ಮಾಯಪ್ಪ ಬಾಣಸಿ, ನಿಂಗಯ್ಯ ಮಠದ, ರಮೇಶ ಬ್ಯಾಗಿ, ವಿಠಲ ಕೋಣಿ, ಜಗದೀಶ ಹರಿಜನ, ಶಾಖಾ ವ್ಯವಸ್ಥಾಪಕ ಪರಪ್ಪ ಗಿರೆಣ್ಣವರ, ವಿಠಲ ಜಟ್ಟೆನ್ನವರ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು, ಶಾಖೆಯ ಸಲಹಾ ಸಮಿತಿ ಸದಸ್ಯರು, ಸಿಬ್ಬಂದಿ, ಸ್ಥಳೀಯರು ಇದ್ದರು.