RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ವಿಕಲಚೇತನರಿಗೆ ವಯಕ್ತಿಕ ಸೌಲಭ್ಯಗಳಿಗಾಗಿ ಅರ್ಜಿಗಳನ್ನು ಆಹ್ವಾನ : ಶಿವಾನಂದ ಹಿರೇಮಠ

ಗೋಕಾಕ:ವಿಕಲಚೇತನರಿಗೆ ವಯಕ್ತಿಕ ಸೌಲಭ್ಯಗಳಿಗಾಗಿ ಅರ್ಜಿಗಳನ್ನು ಆಹ್ವಾನ : ಶಿವಾನಂದ ಹಿರೇಮಠ 

ವಿಕಲಚೇತನರಿಗೆ ವಯಕ್ತಿಕ ಸೌಲಭ್ಯಗಳಿಗಾಗಿ ಅರ್ಜಿಗಳನ್ನು ಆಹ್ವಾನ : ಶಿವಾನಂದ ಹಿರೇಮಠ

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 9  :

ತಾಲೂಕಿನ ಕೊಣ್ಣೂರ ಪುರಸಭೆಯಿಂದ ಸನ್ 2020-21 ನೇ ಸಾಲಿನ ಪುರಸಭೆ ಅನುದಾನದ ಮತ್ತು ಎಸ್.ಎಫ್.ಸಿ ಮುಕ್ತ ನಿಧಿ ಅನುದಾನದ ಮತ್ತು 2019-20 ರ ಸಾಲಿನ ಎಸ್.ಎಫ್.ಸಿ ಅನುದಾನದ ಶೇ. 24.10%ರ ಅಡಿಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಹಾಗೂ ಶೇ 7.25% ರಡಿಯಲ್ಲಿ ಇತರೆ ಹಿಂದುಳಿದ ವರ್ಗದವರಿಗೆ ಮತ್ತು ಶೇ.5% ರಡಿಯಲ್ಲಿ ವಿಕಲಚೇತನರಿಗೆ ವಯಕ್ತಿಕ ಸೌಲಭ್ಯಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಯಕ್ತಿಕ ಸೌಲಭ್ಯಗಳಾದ ಎಂಬಿಬಿಎಸ್/ಬಿಇ ವ್ಯಾಸಂಗ ಮಾಡುತ್ತಿರುವವರಿಗೆ ಲ್ಯಾಪಟಾಫ್, ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ, ಸ್ವಚ್ಛಭಾರತ ಮಿಷನ್ ಯೋಜನೆಯಲ್ಲಿ ವಯಕ್ತಿಕ ಶೌಚಾಲಯ ನಿರ್ಮಾಣದ 3ನೇ ಕಂತು ನೀಡುವುದು, ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ನೀಡುವುದು ಮತ್ತು ವಿಕಲಚೇತನರಿಗೆ ತ್ರಿಚಕ್ರ ವಾಹನ, ಶ್ರವಣ ಸಾಧನ ಪೂರೈಸಲು ಅರ್ಜಿಗಳನ್ನು ಆಹ್ವಾನಿಸಿದ್ದು ಇರುತ್ತದೆ. ಕೊಣ್ಣೂರ ಪುರಸಭೆಯ ವ್ಯಾಪ್ತಿಯ ಅರ್ಹ ಬಡ ಕುಟುಂಬದವರು ದಿ. 06-11-2020 ರ ಒಳಗಾಗಿ ಸಂಬಂದಪಟ್ಟ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ  ಕಛೇರಿ ವೇಳೆಯಲ್ಲಿ ವಿಷಯ ನಿರ್ವಾಹಕರಿಂದ ಹಾಗೂ ಕಾರ್ಯಾಲಯದ ವೆಬ್‍ಸೈಟ ವಿಳಾಸ  www.konnurtown.mrc.gov.in ನಲ್ಲಿ ಮಾಹಿತಿ ಪಡೆಯಬಹುದೆಂದು ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಹಿರೇಮಠ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts: