ಗೋಕಾಕ:ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಪಕ್ಷದ ಕಾರ್ಯಕರ್ತರು ಕಾರ್ಯನಿರ್ವಹಿಸಿ : ಮಾಜಿ ಸಚಿವ ಶಶಿಕಾಂತ
ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಪಕ್ಷದ ಕಾರ್ಯಕರ್ತರು ಕಾರ್ಯನಿರ್ವಹಿಸಿ : ಮಾಜಿ ಸಚಿವ ಶಶಿಕಾಂತ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 9 :
ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಪಕ್ಷದ ಕಾರ್ಯಕರ್ತರು ಕಾರ್ಯನಿರ್ವಹಿಸಿ , ಬಿಜೆಪಿ ನೇತೃತ್ವದ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಬೇಕು ಎಂದು ಬೆಳಗಾವಿ ಜಿಲ್ಲಾ ಪ್ರಭಾರಿ ಹಾಗೂ ಮಾಜಿ ಸಚಿವ ಶಶಿಕಾಂತ ನಾಯಿಕ ಹೇಳಿದರು
ಸೋಮವಾರದಂದು ನಗರದ ಸಿದ್ಧಿ ವಿನಾಯಕ ಮಂದಿರದ ಸಭಾಭವನದಲ್ಲಿ ಬಾರತೀಯ ಜನತಾ ಪಕ್ಷದ ಗೋಕಾಕ ನಗರ ಮಂಡಲ ಪದಾಧಿಕಾರಿಗಳಿಗೆ ಹಮ್ಮಿಕೊಂಡ ಪ್ರಶಿಕ್ಷಣ ವರ್ಗದ ಎರೆಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು
ಪಕ್ಷ ಸಂಘಟನೆಯನ್ನು ಚುನಾವಣಾ ಸಂಧರ್ಭಕ್ಕೆ ಸಿಮೀತಗೋಳಿಸದೆ ನಿರಂತರವಾಗಿ ಕಾರ್ಯಪ್ರವೃತ್ತರಾಗಬೇಕು . ಪಕ್ಷ ನೀಡುವ ಜವಾಬ್ದಾರಿನ್ನು ಪಾಲಿಸಿ ಪಕ್ಷದ ಸಾಧನಗಳನ್ನು ಜನರಿಗೆ ತಿಳಿಸುವ ಜೊತೆಗೆ ತಮಗೆ ನೀಡಿದ 3 ವರ್ಷದ ಅಧಿಕಾರವದಿಯಲ್ಲಿ ಪಕ್ಷಕ್ಕೆ ಅನುಕೂಲವಾಗುವ ಕಾರ್ಯಗಳನ್ನು ಮಾಡಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸವಲತ್ತುಗಳನ್ನು ಜನರಿಗೆ ಮನಮುಟ್ಟುವಂತೆ ತಿಳಿಸುವ ಕಾರ್ಯ ಪಕ್ಷದ ಕಾರ್ಯಕರ್ತರು ಮಾಡಬೇಕು.
ರೈತ ಸಂಘಟನೆ ಮುಖಾಂತರ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಬಂದ ನನಗೆ ಭಾರತೀಯ ಜನತಾ ಪಾರ್ಟಿ ಗುರುತಿಸಿ ಶಾಸಕ ಮತ್ತು ಸಚಿವನಾಗಿ ಕಾರ್ಯಮಾಡುವ ಅವಕಾಶ ಕಲ್ಪಿಸಿದೆ. ಅಂತಹ ಪಕ್ಷದ ಪದಾಧಿಕಾರಿಗಳಾಗಿ ತಾವುಗಳು ನೇಮಕವಾಗಿರುವುದು ಸಂತೋಷದ ಸಂಗತಿಯಾಗಿದೆ ಎಂದು ಹೇಳಿದರು.
ವೇದಿಕೆಯಲ್ಲಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ , ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಜಿಲ್ಲಾ ಕಾರ್ಯದರ್ಶಿ ಬಸವರಾಜ ಹಿರೇಮಠ, ಜಿಲ್ಲಾ ಉಪಾಧ್ಯಕ್ಷ ಶಾಮಾನಂದ ಪೂಜಾರಿ ಇದ್ದರು
ಶಶಿಧರ ದೇಮಶೆಟ್ಟಿ ಸ್ವಾಗತಿಸಿದರು. ಕಿರಣ ಢಮಾಮಗರ ನಿರೂಪಿಸಿ ,ವಂದಿಸಿದರು