RNI NO. KARKAN/2006/27779|Thursday, June 25, 2026
You are here: Home » breaking news » ಗೋಕಾಕ:ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವ ಪೀಳಿಗೆಯ ಮೇಲಿದೆ : ಶಿವಮಯಿ ಮತಾಜಿ

ಗೋಕಾಕ:ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವ ಪೀಳಿಗೆಯ ಮೇಲಿದೆ : ಶಿವಮಯಿ ಮತಾಜಿ 

ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವ ಪೀಳಿಗೆಯ ಮೇಲಿದೆ : ಶಿವಮಯಿ ಮತಾಜಿ

ಗೋಕಾಕ ಜ 12 : ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವ ಪೀಳಿಗೆಯ ಮೇಲಿದೆ ಎಂದು ಇಲ್ಲಿನ ಶಾರದಾ ಶಕ್ತಿ  ಪೀಠದ ಶಿವಮಯಿ ಮತಾಜಿ ಹೇಳಿದರು.
ಗುರುವಾರದಂದು ನಗರದ ಜ್ಞಾನ ಮಂದಿರದಲ್ಲಿ ಸಮೃದ್ಧಿ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜ ಹಾಗೂ ತುಕ್ಕಾರ ಸ್ಕೂಲ್ ಆಫ್ ನರ್ಸಿಂಗ್ ಗೋಕಾಕ ಮತ್ತು ಆರೋಗ್ಯ ನರ್ಸಿಂಗ್ ಮೆಡಿಕಲ್ ಕಾಲೇಜ ಮೂಡಲಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ಸಂಸ್ಕೃತಿಯನ್ನು ಜಗತ್ತಿನಾದ್ಯಂತ ಪಸರಿಸಿದ ವಿವೇಕಾನಂದರು ಯುವಶಕ್ತಿಯ ಮೇಲೆ ಹೆಚ್ಚಿನ ವಿಶ್ವಾಸ ವಿಟ್ಟಿದ್ದರು ಅವ ಆದರ್ಶಗಳನ್ನು ಮೆಚ್ಚಿ ಪಾಶ್ಚಿಮಾತ್ಯ ಸಹೋದರಿ ನಿವೇದಿತಾ ಭಾರತೀಯ ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜಸೇವೆಗೆ ಮುಂದಾದರು.ನರ್ಸಿಂಗ್ ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನದಲ್ಲಿ ಅವರಂತೆ ಸೇವಾ ಮನೋಭಾವದಿಂದ ರೋಗಿಗಳ ಸೇವೆ ಮಾಡುವಂತೆ ಹೇಳಿದರು‌.
ವೇದಿಕೆಯಲ್ಲಿ ಬೆಳಗಾವಿ ಬಿಮ್ಸ್ ನ ಡಾ.ಜ್ಞಾನೇಶ್ವರ ಕೆ.ಬಿ., ಸಂಸ್ಥೆಯ ಅಧ್ಯಕ್ಷ ಡಾ.ಮಹಾಂತೇಶ ಕಡಾಡಿ, ಕಾರ್ಯದರ್ಶಿ ಡಾ.ಮಯೂರಿ ಕಡಾಡಿ, ಪ್ರಾಚಾರ್ಯರಾದ   ವಿಜಯಕುಮಾರ್ ಮಲಕನ್ನವರ, ಮಹಾಂತೇಶ ನಾಗನೂರಿ, ಮಹಾದೇವ ಬಡ್ರೋಳಿ ಇದ್ದರು.

Related posts:

ಗೋಕಾಕ:ಸತೀಶ ಮತ್ತು ಲಖನಗೆ ಬಿಗ್ ಶಾಕ್: ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿತ ಚುನಾಯಿತ ಸದಸ್ಯರಿಂದ ಬಿಜೆಪಿ ಬೆಂಬಲ ?

ಗೋಕಾಕ:ಬಿಎಸ್‍ವೈರಿಂದ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹರ್ಷ.

ಗೋಕಾಕ:ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ‌ : ಅರಮನಾಥ ಜಾರಕಿಹೊಳಿ