RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಮಿಸಕಾಲ್ ಮಾಡಿ ಉತ್ತರ ಪಡೆಯಿರಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ವರದಾನವಾಗಿದೆ : ತಹಶೀಲ್ದಾರ ಡಾ.ಮೋಹನ ಭಸ್ಮೆ

ಗೋಕಾಕ:ಮಿಸಕಾಲ್ ಮಾಡಿ ಉತ್ತರ ಪಡೆಯಿರಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ವರದಾನವಾಗಿದೆ : ತಹಶೀಲ್ದಾರ ಡಾ.ಮೋಹನ ಭಸ್ಮೆ 

ಮಿಸಕಾಲ್ ಮಾಡಿ ಉತ್ತರ ಪಡೆಯಿರಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ವರದಾನವಾಗಿದೆ : ತಹಶೀಲ್ದಾರ ಡಾ.ಮೋಹನ ಭಸ್ಮೆ
ಗೋಕಾಕ ಫೆ 5 : ಮೊಬೈಲ್ ಬಳಸಿ ಶಿಕ್ಷಣ ನೀಡುವ ವಿನೂತನ ಕಾರ್ಯಕ್ರಮ ಮಿಸಕಾಲ್ ಮಾಡಿ ಉತ್ತರ ಪಡೆಯಿರಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ವರದಾನವಾಗಿದೆ ಎಂದು ತಹಶೀಲ್ದಾರ ಡಾ.ಮೋಹನ್ ಭಸ್ಮೆ ಹೇಳಿದರು.

ಸೋಮವಾರದಂದು ನಗರದ ಮಯೂರ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯವರು ಏರ್ಪಡಿಸಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಮಿಸಕಾಲ್ ಮಾಡಿ ಉತ್ತರ ಪಡೆಯಿರಿ ಎಂಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
ಜೀವನದಲ್ಲಿ ಯಾವಾಗ ಏನುಬೇಕಾದರೂ ಆಗಬಹುದು ಹಾಗೆ ಒಂದು ಮಿಸಕಾಲ್ ವಿದ್ಯಾರ್ಥಿಗಳ ಜೀವನ ಬದಲಾವಣೆ ಮಾಡಬಹುದು ಹಾಗಾಗಿ ಗೋಕಾಕ ವಲಯದ ಎಲ್ಲಾ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಇದರ ಉಪಯೋಗ ಪಡೆದು ಅಂತಿಮ ಹಂತದ ಪರೀಕ್ಷೆಗೆ ತಯಾರಾಗಬೇಕು. ಪರಿಣಿತ ಶಿಕ್ಷಕರು ವಿದ್ಯಾರ್ಥಿಗಳನ್ನು ರೂಪಿಸುವ ಕಾರಖಾನೆ ಇದ್ದಂತೆ ಶಾಲಾ ಅವಧಿ ಮುಗಿದರೂ ಸಹ ವಿದ್ಯಾರ್ಥಿಗಳ ಬಾಳನ್ನು ಬೆಳಗುವ ಹಿತದೃಷ್ಟಿಯಿಂದ ಒಂದು ವಾರಗಳ ಕಾಲ್ ಮಿಸಕಾಲ್ ಮಾಡಿ ಉತ್ತರ ಪಡೆಯಿರಿ ಎಂಬ ಕಾರ್ಯಕ್ರಮದಡಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿ ಅವರನ್ನು ಪರೀಕ್ಷೆ ತಯಾರಿ ಮಾಡುವ ರೀತಿ ನಿಜವಾಗಿಯೂ ಶ್ಲಾಘನೀಯ ಎಂದ ಅವರು ಶಿಕ್ಷಣ ಇಲಾಖೆಯ ಇಂತಹ ಕಾರ್ಯಕ್ರಮಗಳಿಗೆ ತಾಲೂಕು ಆಡಳಿತ ಸದಾ ಸಹಕಾರ ನೀಡಲು ಸಿದ್ದ ಎಂದರು.
ಶಿಕ್ಷಕರ ಈ ಪ್ರಯತ್ನದಿಂದ ಒಬ್ಬ ಅನುತೀರ್ಣ ಹೊಂದುವ ವಿದ್ಯಾರ್ಥಿ ಉತ್ತೀರ್ಣವಾದರೆ ಅದೇ ನಿಮ್ಮ ಪ್ರಯತ್ನಕ್ಕೆ ಸಿಕ್ಕ ದೊಡ್ಡ ಜಯ ಎಂದು ಭಾವಿಸಿ . ವಿದ್ಯಾರ್ಥಿಗಳನ್ನು ತೃಪ್ತಿ ಪಡೆಸುವ ರೀತಿಯಲ್ಲಿ ಶಿಕ್ಷಕರು ಉತ್ತರಗಳನ್ನು ನೀಡಿ ಎಂದು ತಹಶೀಲ್ದಾರ್ ಡಾ.ಮೊಹನಕುಮಾರ ಭಸ್ಮೆ ಹೇಳಿದರು.
ಕಾರ್ಯಕ್ರಮವನ್ನು ಮಮದಾಪೂರ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ ಸನದಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಡಿ.ವಾಯ್.ಎಸ.ಪಿ. ಡಿ.ಎಚ್.ಮುಲ್ಲಾ , ಬಿಇಒಗಳಾದ ಜಿ.ಬಿ.ಬಳಗಾರ, ಅಜೀತ ಮನ್ನಿಕೇರಿ, ಪಿಎಸ್ಐ ಕೆ.ವಾಲಿಕರ, ವಲಯ ಅರಣ್ಯ ಅಧಿಕಾರಿ ಸಂಜೀವ ಸಂಸುದ್ದಿ, ಡಾ.ಮೋಹನ್ ಕಮತ್, ಎಂ.ಬಿ.ಪಾಟೀಲ್, ಎಂ.ಎಲ್.ಜನ್ಮಟ್ಟಿ, ಸಿಡಿಪಿಓ ಕೂಡವಕ್ಕಲಿಗ ಉಪಸ್ಥಿತರಿದ್ದರು.

Related posts: