ಗೋಕಾಕ:ಲೋಳಸೂರ ಸೇತುವೆ ನಿರ್ಮಿಸಲು ಕ್ರಮ : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಸತೀಶ ಅಭಿಮತ

ಲೋಳಸೂರ ಸೇತುವೆ ನಿರ್ಮಿಸಲು ಕ್ರಮ : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಸತೀಶ ಅಭಿಮತ
ಗೋಕಾಕ ಅ 3 : ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ನರಗದಲ್ಲಿ ಹಾಳನಿಗೊಳಗಾದ ಪ್ರದೇಶಗಳಿಗೆ ಶನಿವಾರದಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಲೋಳಸೂರ, ಸೇತುವೆ, ಚಿಕ್ಕೋಳಿ ಸೇತುವೆ, ಯೋಗಿಕೋಳ್ಳ ಸೇರಿದಂತೆ ಇತರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಡಿ ನೀಡಿದ ಅವರು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೂಡಲೇ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಗರದಲ್ಲಿ ಪ್ರವಾಹದಿಂದ ಲೋಳಸೂರ ಸೇತುವೆ, ಚಿಕ್ಕೋಳಿ ಸೇತುವೆ ಸೇರಿದಂತೆ ಕೆಲ ರಸ್ತೆಗಳು ಹಾಳಾಗಿದ್ದು, ಅವುಗಳನ್ನು ಕೂಡಲೇ ದುರಸ್ತಿ ಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಲೋಳಸೂರ ಸೇತುವೆಯನ್ನು ಕೂಡಲೇ ದುರಸ್ಥಿಗೋಳಿಸಿ ಬಸ್ ಸಂಚರಿಸಲು ಕ್ರಮ ಕೈಗೊಳ್ಳಲಾಗಿದ್ದು, ತ್ವರಿತವಾಗಿ ಕಾಮಗಾರಿ ಕೈಗೊಳ್ಳಲಾಗಿದ್ದು, ಶನಿವಾರ ಸಾಯಂಕಾಲದವರೆಗೆ ಬಸ್ ಸಂಚರಿಸಲು ಮುಕ್ತಾ ಮಾಡಲಾಗುವುದು ನಂತರ ಲೋಕೋಪಯೋಗಿ ಇಲಾಖೆಯ ಅಭಿಯಂತರರು ಬಂದು ಸರ್ವೇ ಮಾಡಿ ವರದಿ ಸಲ್ಲಿಸಿದ ನಂತರ ಇತರ ದೊಡ್ಡ ವಾಹನಗಳನ್ನು ಸಂಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಗರಕ್ಕೆ ಸಂಪರ್ಕ ಕಲ್ಪಿಸುವ ಲೋಳಸೂರ ಸೇತುವೆಯನ್ನು ನಿರ್ಮಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಆದಷ್ಟು ಬೇಗ ಕಾಮಗಾರಿಯನ್ನು ಪ್ರಾರಂಭಿಸಲು ಕ್ರಮ ಜರುಗಿಸಲಾಗುವುದು ಎಂದ ಅವರು ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಶಾಶ್ವತ ಪುನರ್ವಸತಿ ಕಲ್ಪಿಸುವುದು ಕಷ್ಟಕರವಾಗಿದ್ದು ಆ ಪ್ರದೇಶಗಳಿಗೆ ನೀರು ನುಗ್ಗದಂತೆ ಶಾಶ್ವತ ಕ್ರಮ ಜರುಗಿಸಲಾಗುವುದು ಎಂದರು.
ರಾಜ್ಯದಲ್ಲಿ ಮುಡಾ ಹಾಗೂ ವಾಲ್ಮೀಕಿ ಹಗರಣಗಳು ಜೋರಾಗಿ ಸುದ್ದು ಮಾಡುತ್ತಿದೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಇದರ ಬಗ್ಗೆ ಈಗಾಗಲೇ ಕಾನೂನು ಹೋರಾಟ ನಡೆಸಲಾಗುತ್ತಿದ್ದು, ಕಾನೂನೆ ಅದಕ್ಕೆ ಸೂಕ್ತ ಉತ್ತರ ನೀಡುತ್ತದೆ ಎಂದು ಹೇಳಿದರು.