RNI NO. KARKAN/2006/27779|Sunday, February 15, 2026
You are here: Home » breaking news » ಗೋಕಾಕ:ಪೌಷ್ಟಿಕ ಆಹಾರವಾದ ಹಾಲನ್ನು ವ್ಯರ್ಥ ಮಾಡದೆ ಮಕ್ಕಳಿಗೆ ,ರೋಗಿಗಳಿಗೆ ನೀಡಿ : ಮುರುಘರಾಜೇಂದ್ರ ಶ್ರೀ

ಗೋಕಾಕ:ಪೌಷ್ಟಿಕ ಆಹಾರವಾದ ಹಾಲನ್ನು ವ್ಯರ್ಥ ಮಾಡದೆ ಮಕ್ಕಳಿಗೆ ,ರೋಗಿಗಳಿಗೆ ನೀಡಿ : ಮುರುಘರಾಜೇಂದ್ರ ಶ್ರೀ 

ಪೌಷ್ಟಿಕ ಆಹಾರವಾದ ಹಾಲನ್ನು ವ್ಯರ್ಥ ಮಾಡದೆ ಮಕ್ಕಳಿಗೆ ,ರೋಗಿಗಳಿಗೆ ನೀಡಿ : ಮುರುಘರಾಜೇಂದ್ರ ಶ್ರೀ

ಗೋಕಾಕ ಅ 8 : ಪೌಷ್ಟಿಕ ಆಹಾರವಾದ ಹಾಲನ್ನು ವ್ಯರ್ಥ ಮಾಡದೆ ಮಕ್ಕಳಿಗೆ ,ರೋಗಿಗಳಿಗೆ ನೀಡುವ ಮೂಲಕ ಬಸವ ಪಂಚಮಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಇಲ್ಲಿನ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.
ಗುರುವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ಬಸವ ಧರ್ಮ ಪ್ರಚಾರಕ ಸಂಸ್ಥೆ, ಲಿಂಗಾಯತ ಮಹಿಳಾ ವೇದಿಕೆ, ವಚನ ಸಾಹಿತ್ಯ ಚಿಂತನ ,ಮಂಥನ ವೇದಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ಬಸವ ಪಂಚಮಿ ನಿಮಿತ್ತ ರೋಗಿಗಳಿಗೆ ಹಾಲನ್ನು ವಿತರಿಸಿ ಅವರು ಮತನಾಡುತ್ತಿದ್ಧರು.
ಕಳೆದ ಹಲವು ವರ್ಷಗಳಿಂದ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಲಾಗುತ್ತಿದ್ದು,ಜನರು ಲಕ್ಷಾಂತರ ಲೀಟರ್ ಹಾಲು, ತುಪ್ಪ, ಹಣ್ಣನ್ನು ಹುತ್ತ, ನಾಗರ ಕಲ್ಲುಗಳ ಮೇಲೆ ಸುರಿಯುತ್ತಾರೆ. ಹಾವು ಹಾಲು ಕುಡಿಯುವುದಿಲ್ಲ ಎಂದು ವೈಜ್ಞಾನಿಕವಾಗಿ ಸಾಬೀತಾದರೂ ಜನರು ಮೌಢ್ಯ ಅನುಸರಿಸುತ್ತಿದ್ದಾರೆ. ಜನತೆ ಮೂಡನಂಬಿಕೆಗಳಿಂದ ಹೊರಬಂದು ನಿಜವಾದ ಆಚರಣೆಗಳನ್ನು ಆಚರಿಸಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ. ಬ್ರಹ್ಮಾನಂದ ಸ್ವಾಮೀಜಿ, ಡಾ.ರವೀಂದ್ರ ಅಂಟಿನ, ಬಸನಗೌಡ ಪಾಟೀಲ,ಬಸವರಾಜ ಖಾನಪ್ಪನವರ ಶೈಲಾ ಬೀದರಿ, ಎಸ್.ಕೆ.ಮಠದ, ಬಸವರಾಜ ಹತ್ತರಕಿ, ಮಹಾಲಿಂಗಪ್ಪ ನೇಗಿನಾಳ, ಕಾಳಪ್ಪ ಗುರಾಣಿ, ಶ್ರೀಕಾಂತ್ ಹಳ್ಳೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts: