RNI NO. KARKAN/2006/27779|Saturday, June 14, 2025
You are here: Home » breaking news » ಬೆಳಗಾವಿ:ಸಿ.ಟಿ ರವಿ ಅಸಭ್ಯ ಪದ ಬಳಕೆ; ಅದು ಕ್ರಿಮಿನಲ್ ಅಪರಾಧ: ಸಿಎಂ ಸಿದ್ದರಾಮಯ್ಯ

ಬೆಳಗಾವಿ:ಸಿ.ಟಿ ರವಿ ಅಸಭ್ಯ ಪದ ಬಳಕೆ; ಅದು ಕ್ರಿಮಿನಲ್ ಅಪರಾಧ: ಸಿಎಂ ಸಿದ್ದರಾಮಯ್ಯ 

ಸಿ.ಟಿ ರವಿ ಅಸಭ್ಯ ಪದ ಬಳಕೆ; ಅದು ಕ್ರಿಮಿನಲ್ ಅಪರಾಧ: ಸಿಎಂ ಸಿದ್ದರಾಮಯ್ಯ

ಬೆಳಗಾವಿ ಡಿ 19 : ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಅದು ಕ್ರಿಮಿನಲ್ ಅಪರಾಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಗುರುವಾರ ಮಾಧ್ಯಮದವರ ಜತೆಗೆ ಮಾತನಾಡಿದರು.
ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನಪರಿಷತ್ ಸಭಾಪತಿಯವರಿಗೆ ದೂರು ನೀಡಿರುವ ಬಗ್ಗೆ ಮಾಹಿತಿ ಇಲ್ಲ ಎಂದ ಸಿದ್ದು, ಸಿ.ಟಿ.ರವಿ ಅವರು ಆರೋಪವನ್ನು ಅಲ್ಲಗಳೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶದಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಪರಿಷತ್‌ನಲ್ಲಿ ಗುರುವಾರ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಮಾತಿನ ಚಕಮಕಿ ನಡೆಯಾಗ ನನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಸದನದಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿದ್ದು. ಸಿ.ಟಿ ರವಿ ವಿರುದ್ಧ ಕಾಂಗ್ರೆಸ್​ ನಾಯಕರು ಮುಗಿಬಿದ್ದಿದ್ದಾರೆ.

Related posts: