RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಸಿ.ಟಿ.ರವಿ ಅವರನ್ನು ಪರಿಷತ್ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿ ಗೋಕಾಕದಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ

ಗೋಕಾಕ:ಸಿ.ಟಿ.ರವಿ ಅವರನ್ನು ಪರಿಷತ್ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿ ಗೋಕಾಕದಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ 

ಸಿ.ಟಿ.ರವಿ ಅವರನ್ನು ಪರಿಷತ್ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿ ಗೋಕಾಕದಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ
ಗೋಕಾಕ ಡಿ 20 : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಪರಿಷತ್ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸಿ.ಟಿ.ರವಿ ಅವರ ಭಾವಚಿತ್ರಕ್ಕೆ ಬೆಂಕಿ ಹಂಚಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಡಾ.ಮಹಾಂತೇಶ ಕಡಾಡಿ ಶ್ರೀರಾಮ ಹೆಸರು ಹೇಳಿ ರಾಜಕೀಯ ಮಾಡುತ್ತಿರುವ ಬಿಜೆಪಿ ಸಿ.ಟಿ ರವಿ ರಾಜಕೀಯದಲ್ಲಿ ಇರಲು ಅಯೋಗ್ಯರು. ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣಿಗೆ ಪೂಜಾಭಾವನೆಯಿಂದ ನೋಡುತ್ತಾರೆ. ಇಂತಹ ಸಂಸ್ಕೃತಿ ಭರಿತ ರಾಜ್ಯದಲ್ಲಿ ಮಹಿಳೆಯನ್ನು ಅವಮಾನಿಸಿದ್ದು ಸರಿಯಲ್ಲ ಬಿಜೆಪಿ ಪಕ್ಷಕ್ಕೆ ನೈತಿಕತೆ ಇಲ್ಲ ತಕ್ಷಣದಲ್ಲಿ ಎಂ ಎಲ್.ಸಿ ಸ್ಥಾನದಿಂದ ರವಿ ಅವರನ್ನು ವಜಾ ಮಾಡಬೇಕು ಎಂದ ಅವರು ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಸಚಿವ ಅಮಿತ್ ಶಾ ಅವರು ಕೂಡಾ ತಕ್ಷಣ ಕ್ಷೆಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಮುಖಂಡ ಅಶೋಕ್ ಪೂಜಾರಿ ಮಾತನಾಡಿ ಪ್ರಜಾಪ್ರಭುತ್ವದ ಕೋಲೆ ಮಾಡಿದ ಪರಿಷತ್ ಸದಸ್ಯ ಸಿ.ಟಿ ಅವರ ಮೇಲೆ ಯಾವ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು. ಏನೋ ಸಾಕ್ಷಿ ಇಲ್ಲದೆ ದೂರು ಕೊಡಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಹುಚ್ಚರಲ್ಲ ಅವರು ಬಳಹ ಪ್ರಜ್ಜಾವಂತ ರಾಜಕಾರಣಿ ಹಾಗಾಗಿ ಅವರು ದೂರು ನೀಡಿದ್ದು ಸತ್ಯವಾಗಿದ್ದು, ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಮಹಿಳೆಯರಿಗೆ ಗೌರವ ನೀಡಬೇಕು ಎಂದು ಸರಕಾರವನ್ನು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಿದ್ದಲಿಂಗ ದಳವಾಯಿ, ಚಂದ್ರಶೇಖರ್ ಕೊಣ್ಣೂರ, ಚಂದನ್ ಗಿಡ್ಡನ್ನವರ, ದಸ್ತಗಿರಿ ಪೈಲವಾನ, ಸಾದಿಕ ಲಾಡಖಾನ, ಶಬ್ಬೀರ ಮುಜಾವರ, ಸಂಜೀವ ಪೂಜಾರಿ, ಅಬ್ಬಝಲ್ ಖತೀಬ, ಶೌಕತ ಖಾಜಿ, ಸಂಗೀತಾ ಕಾಂಬಳೆ, ಶಾರದಾ ಹೊನಕುಪ್ಪಿ, ಸುನೀತಾ ಕೊಣ್ಣೂರ, ಸುನೀತಾ ಕೊಳವಿ ಉಪಸ್ಥಿತರಿದ್ದರು.

Related posts: