RNI NO. KARKAN/2006/27779|Sunday, February 15, 2026
You are here: Home » ಮುಖಪುಟ » ಸಂಘಟನಾತ್ಮಕ ಮನೋಭಾವನೆ ಬೆಳೆಸಿಕೊಳ್ಳಿ :: ಯುವಕರಿಗೆ ಮಾಜಿ ಸಚಿವ ಬಾಲಚಂದ್ರ ಕರೆ

ಸಂಘಟನಾತ್ಮಕ ಮನೋಭಾವನೆ ಬೆಳೆಸಿಕೊಳ್ಳಿ :: ಯುವಕರಿಗೆ ಮಾಜಿ ಸಚಿವ ಬಾಲಚಂದ್ರ ಕರೆ 

ಸಂಘಟನಾತ್ಮಕ ಮನೋಭಾವನೆ ಬೆಳೆಸಿಕೊಳ್ಳಿ :: ಯುವಕರಿಗೆ ಮಾಜಿ ಸಚಿವ ಬಾಲಚಂದ್ರ ಕರೆ

ಬೆಳಗಾವಿ :: ಯುವಕರು ಸಂಘಟಿತರಾಗಿ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನು ತೊಡಗಿಸಿಕೊಳ್ಳಬೇಕೆಂದು ಅರಬಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಗೋಕಾಕ ತಾಲೂಕಿನ ಅರಭಾವಿ ತೋಟದ ಲಕ್ಷ್ಮೀ ನಗರದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಕರು ಸಮಾಜದ ಅಭಿವೃದ್ಧಿಗಾಗಿ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಬೇಕು. ಯಾವುದೇ ವೈಮನಸ್ಸು ಇಟ್ಟುಕೊಳ್ಳದೇ ಸಂಘಟನೆಯ ಮೂಲಕ ಕಾರ್ಯವನ್ನು ಮಾಡಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯವನ್ನು ಒದಗಿಸುವಂತಹ ಕಾರ್ಯ ಮಾಡಬೇಕು ಎಂದು ಕರೆ ನೀಡಿದರು.

Related posts: