RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಬೇಕು: ಇಲಾಹಿ ಜಮಾದಾರ

ಗೋಕಾಕ:ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಬೇಕು: ಇಲಾಹಿ ಜಮಾದಾರ 

ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಬೇಕು: ಇಲಾಹಿ ಜಮಾದಾರ

ಗೋಕಾಕ  ಸೆ  25  :  ಸರ್ಕಾರಿ    ಶಾಲೆಗಳು ಪ್ರಗತಿ ಸಾಧಿಸಲು ಸ್ಥಳೀಯರ ಸಹಾಯ, ಸಹಕಾರ ಅವಶ್ಯಕ. ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ    ಶಾಲೆಗಳಿಗೆ ಕಳುಹಿಸಬೇಕೆಂದು ಇಲ್ಲಿಯ ನಿಂಗ್ಯಯ  (ಅಂಬೇಡ್ಕರ್) ನಗರದ  ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು  ಶಾಲೆಯ ಎಸ್‍ಡಿಎಮ್‍ಸಿ ಅಧ್ಯಕ್ಷ ನೂರ ಇಲಾಹಿ ಜಮಾದಾರ   ಹೇಳಿದರು.
     ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು  ಶಾಲೆಯಲ್ಲಿ ಬುಧವಾರದಂದು  ನಡೆದ ಶೂ ಮತ್ತು ಸ್ವಾಕ್ಸ್ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಶಾಲೆಯ ಮಕ್ಕಳಿಗೆ ಶೂ ಮತ್ತು ಸ್ವಾಕ್ಸ್ ವಿತರಿಸಿ ಮಾತನಾಡಿ, ನಾಡಿನ ಪ್ರತಿಯೊಬ್ಬರೂ ಕನ್ನಡ ಶಾಲೆಗಳ ಉಳಿವಿಗೆ ಪ್ರಯತ್ನಿಸಬೇಕು ಎಂದರು.
     ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಚಿಕ್ಕುಂಬಿ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಎಲ್ಲ ತರಗತಿಯ ಮಕ್ಕಳಿಗೆ ಶೂ ಮತ್ತು ಸ್ವಾಕ್ಸ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ ಎಂ ಸಿ ಸದಸ್ಯರಾದ ಸಾಧಿಕ ಹಲ್ಯಾಳ , ಯಾಕುಬ ಮುಜಾವರ , ಶಿಕ್ಷಕಿಯರಾದ ಶ್ರೀಮತಿ ಸಲ್ಲಾಂ ಮುಲ್ಲಾ , ಕುಮಾರಿ ಶಾಹೀನ ಮಾರಿಹಾಳ ಸೇರಿದಂತೆ  ಶಿಕ್ಷಣಪ್ರೇಮಿಗಳು, ಶಿಕ್ಷಕರು, ಸಿಬ್ಬಂದಿ, ಇತರರು ಇದ್ದರು.

Related posts: