ಗೋಕಾಕ:ವೈಭವದಿಂದ ಅದ್ಧೂರಿಯಾಗಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ
ವೈಭವದಿಂದ ಅದ್ಧೂರಿಯಾಗಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಬೆಟಗೇರಿ ನ 1 : ಗ್ರಾಮದ ಕರ್ನಾಟಕ ರಕ್ಷಣಾವೇದಿಕೆ ಹಾಗೂ ಬೆಳಗಾವಿ ಡಾ.ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಪ್ರತಿಷ್ಠಾನ ಇವರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ವೈಭವದಿಂದ ಅದ್ಧೂರಿಯಾಗಿ ಗುರುವಾರ ನ.1 ರಂದು ಜರುಗಿತು.
ಮುಂಜಾನೆ 9ಗಂಟೆಗೆ ಗ್ರಾಮದ ವಿವಿಧ ವೃತ್ತದಲ್ಲಿರುವ ಪುತ್ಥಳಿಗಳಿಗೆ ಪೂಜೆ, ಪುಷ್ಪಾರ್ಪಣೆ ಸಮರ್ಪಣೆ ಬಳಿಕ ಇಲ್ಲಿಯ ಅಶ್ವಾರೂಢ ಬಸವೇಶ್ವರ ವೃತ್ತದಿಂದ ಸಂಗೋಳ್ಳಿ ರಾಯಣ್ಣ ವೃತ್ತದವರೆಗೆ ಶಾಲಾ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಕನ್ನಡಪರ ಜಯಘೋಷ, ವಿವಿಧ ಆಕರ್ಷಕ ರೂಪಕಗಳೊಂದಿಗೆ ಕರಡಿ ಮಜಲು ಹಾಗೂ ಜಾನಪದ ಕಲಾ ತಂಡಗಳು ಸೇರಿದಂತೆ ಸಕಲ ವಾದ್ಯಮೇಳಗಳೊಂದಿಗೆ ಭುವನೇಶ್ವರಿ ದೇವಿಯ ಮತ್ತು ಕೃಷ್ಣಶರ್ಮರ ಭಾವಚಿತ್ರದ ಭವ್ಯ ಮೇರವಣಿಗೆ ಸಡಗರದಿಂದ ನಡೆಯಿತು.
ಸ್ಥಳೀಯ ಪ್ರೌಢ ಶಾಲೆ ಮುಖ್ಯಾಧ್ಯಾಪಕ ರಮೇಶ ಅಳಗುಂಡಿ, ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಸೇರಿದಂತೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಕನ್ನಡ ಪರ ಹೋರಾಟಗಾರರು, ಕರವೇ ಕಾರ್ಯಕರ್ತರು, ಸಾಹಿತಿ-ಶರಣರು, ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಯುವಕರು, ಗ್ರಾಮಸ್ಥರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು ಭವ್ಯ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಭುವನೇಶ್ವರಿ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ : ಕನ್ನಡ ನಾಡಿನ ಸಾಹಿತ್ಯ, ಕಲೆ, ಭಾಷೆ, ಸಂಸ್ಕøತಿ, ಸಂಪ್ರದಾಯ, ಜಗತ್ತಿನಲ್ಲಿಯೇ ಶ್ರೇಷ್ಠವಾಗಿದೆ. ಇಂದು ಪ್ರತಿಯೊಬ್ಬರೂ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ಪುರುಷರನ್ನು ಸ್ಮರಿಸುವ ಸುದಿನವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದÀ ವೀರಭದ್ರಪ್ಪ ವೀರಸಂಗಪ್ಪ ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ನ.1 ರಂದು ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಸಮರ್ಪನೆ ಸಡಗರದಿಂದ ಜರುಗಿತು. ಕನ್ನಡ ಪರ ಜಯಘೋಷಗಳೊಂದಿಗೆ ಭುವನೇಶ್ವರಿಯ ಹಾಗೂ ಆನಂದಕಂದರ ಭಾವಚಿತ್ರದ ಭವ್ಯ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ಅದ್ಧೂರಿಯಾಗಿ ನಡೆದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಹಲವು ಕನ್ನಡಪರ ಗೀತೆಗಳ ಪ್ರಸ್ತುತ ಪಡಿಸಿದರು.
ಮಂಜುನಾಥ ಹತ್ತಿ, ಮಲ್ಲಿಕಾರ್ಜುನ ಹಿರೇಮಠ, ಜಯಶ್ರೀ ಇಟ್ನಾಳ, ಶುಭಾ.ಬಿ., ಮೋಹನ ತುಪ್ಪದ, ವಿದ್ಯಾದರ ಬಿರಾದರ, ಅಪ್ಪಾಸಾಹೇಬ ತಾಂವಶಿ, ರಮೇಶ ಬುದ್ನಿ, ವೀಣಾ ಹತ್ತಿ, ಮಲ್ಹಾರಿ ಪೋಳ, ಪ್ರಮೋದ ದಾಸರ, ಶಾಲೆಯ ಎಸ್ಡಿಎಮ್ಸಿ ಅಧ್ಯಕ್ಷ, ಸದಸ್ಯರು, ಇಲ್ಲಿಯ ಕನ್ನಡ ಪರ ಹೋರಾಟಗಾರರು, ಕರವೇ ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಯುವಕರು, ಗಣ್ಯರು ಉಪಸ್ಥಿತರಿದ್ದರು.