ಗೋಕಾಕ:ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಅವರನ್ನು ಅಪೌಷ್ಟಿಕತೆಯಿಂದ ರಕ್ಷಿಸಬೇಕು : ಡಾ|| ಜಗದೀಶ ಜಿಂಗಿ
ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಅವರನ್ನು ಅಪೌಷ್ಟಿಕತೆಯಿಂದ ರಕ್ಷಿಸಬೇಕು : ಡಾ|| ಜಗದೀಶ ಜಿಂಗಿ
ಗೋಕಾಕ.ಡಿ 6 : ಮಕ್ಕಳ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಿ ಅವರ ಸರ್ವಾಂಗೀಣ ಬೆಳವಣಿಗೆಗೆ ಸರ್ಕಾರ ಶ್ರಮಿಸುತ್ತಿದ್ದು ಪಾಲಕರು ಇದರ ಸದುಪಯೋಗ ಪಡಿಸಿಕೊಳ್ಳವಂತೆ ಸಾರ್ವಜನಿಕ ಆಸ್ಪತ್ರೆಯ ಚಿಕ್ಕ ಮಕ್ಕಳ ತಜ್ಞ ಡಾ|| ಜಗದೀಶ ಜಿಂಗಿ ಹೇಳಿದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಿಶು ಅಭಿವೃದ್ದಿ ಯೋಜನೆ ಹಾಗೂ ಆರೋಗ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಅಪೌಷ್ಟಿಕ ಮಕ್ಕಳ ವಿಶೇಷ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಮಕ್ಕಳಿಗೆ ತಾಯಂದಿರು ಪೌಷ್ಟಿಕ ಆಹಾರ ನೀಡಿ ಅವರನ್ನು ಅಪೌಷ್ಟಿಕತೆಯಿಂದ ರಕ್ಷಿಸಬೇಕು. ಸರ್ಕಾರ ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಟಿಕ ಆಹಾರಗಳನ್ನು ನೀಡುತ್ತಿದ್ದು, ಆಹಾರದೊಂದಿಗೆ ಪೌಷ್ಟಿಕವಾದ ಔಷಧಗಳನ್ನು ನೀಡುತ್ತಿದೆ. ಅಲ್ಲದೇ ಕಾಲ ಕಾಲಕ್ಕೆ ಆರೋಗ್ಯ ಇಲಾಖೆಯಿಂದ ಶಿಬಿರಗಳನ್ನು ಏರ್ಪಡಿಸಿ ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿಯನ್ನು ವಹಿಸಲಾಗುತ್ತಿದ್ದು ಪಾಲಕರು ಕೂಡಾ ಮುರ್ತುವರ್ಜಿ ವಹಿಸಿ ಇಲಾಖೆಯೊಂದಿಗೆ ಕೈ ಜೋಡಿಸಬೇಕೆಂದು ವಿನಂತಿಸಿದರು.
ಈ ಶಿಬಿರದಲ್ಲಿ ಕೊಳವಿ, ಮಮದಾಪೂರ ಹಾಗೂ ಖನಗಾಂವ ವಲಯದ ಅಪೌಷ್ಟಿಕ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸಿ, ಸೂಕ್ತ ಚಿಕಿತ್ಸೆ ಹಾಗೂ ಮಾರ್ಗದರ್ಶನ ನೀಡಲಾಯಿತು.
ಈ ಸಂದರ್ಭದಲ್ಲಿ ಅಂಗನವಾಡಿ ಮೇಲ್ವಿಚಾರಕಿಯರಾದ ನಸ್ರೀನ್ ಕೊಣ್ಣೂರ, ಮಹಾದೇವಿ ಹೊಸಮನಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಅನೇಕರು ಇದ್ದರು.