ಗೋಕಾಕ:ಕಾರ್ನಾಡ ನಿಧನದಿಂದ ನಾಡಿಗೆ ಅಪಾರ ಹಾನಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಕಾರ್ನಾಡ ನಿಧನದಿಂದ ನಾಡಿಗೆ ಅಪಾರ ಹಾನಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಜೂ 10 :
ಹಿರಿಯ ರಂಗಕರ್ಮಿ, ಕನ್ನಡ ಸಾರಸ್ವತ ಲೋಕದ ಶ್ರೇಷ್ಠ ಚಿಂತಕ, ನಟ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಸಾಹಿತಿ ಡಾ.ಗಿರೀಶ ಕಾರ್ನಾಡ ಅವರ ನಿಧನಕ್ಕೆ ಅರಭಾವಿ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ, ಡಾ.ಗಿರೀಶ ಕಾರ್ನಾಡ ಅವರು ಸೋಮವಾರ ಬೆಳಿಗ್ಗೆ ಇಹಲೋಕ ತ್ಯಜಿಸಿರುವುದು ಕನ್ನಡ ನಾಡಿಗೆ ಅಪಾರ ಹಾನಿಯಾಗಿದೆ. ಬಹುಮುಖ ಪ್ರತಿಭೆಯ ಪದ್ಮಭೂಷಣ ಡಾ.ಕಾರ್ನಾಡ ಅವರು ಕರ್ನಾಟಕ ಕಂಡ ಅಪ್ರತಿಮ ಸಾಹಿತಿ-ಲೇಖಕ. ಇದರಿಂದ ಶ್ರೇಷ್ಠ ಚಿಂತಕರೊಬ್ಬರನ್ನು ಕಳೆದುಕೊಂಡು ನಾಡು ಬಡವಾಗಿದೆ. ಡಾ.ಕಾರ್ನಾಡ ಅವರ ಅಪ್ರತಿಮ ಸಾಹಿತ್ಯ, ರಂಗಭೂಮಿ ಹಾಗೂ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಸಾಕಷ್ಟು ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದಿದ್ದವು. ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಜ್ಞಾನಪೀಠ ಪ್ರಶಸ್ತಿ ಇವರ ಮುಡುಗೇರಿರುವುದು ಕನ್ನಡ ಸಾರಸ್ವತ ಲೋಕಕ್ಕೆ ಕಿರೀಟ ಪ್ರಾಯವಾಗಿದೆ. ಡಾ.ಗಿರೀಶ ಕಾರ್ನಾಡ ಅವರ ಕುಟುಂಬದಲ್ಲಾದ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಂತಾಪ ಸೂಚಕದಲ್ಲಿ ಪ್ರಾರ್ಥಿಸಿದ್ದಾರೆ.