ರಾಮದುರ್ಗ:ಸಾಹಿತಿ ಸುರಕೋಡ ಅವರಿಗೆ ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ ಪ್ರಧಾನ
ಸಾಹಿತಿ ಸುರಕೋಡ ಅವರಿಗೆ ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ ಪ್ರಧಾನ
ರಾಮದುರ್ಗ ಜು 21: ರಾಜ್ಯ ಸರಕಾರದ ಪ್ರತಿಷ್ಠಿತ ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿಯನ್ನು ರಾಮದುರ್ಗದಲ್ಲಿ ಇಂದು ಹಸನ್ ನಯೀಂ ಸುರಕೋಡ ಅವರಿಗೆ ಪ್ರದಾನ ಮಾಡಲಾಯಿತು.
ಸಚಿವೆ ಶ್ರೀಮತಿ ಉಮಾಶ್ರೀ ಅವರ ಅನುಪಸ್ಥಿತಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಶ್ರೀಮತಿ ಅರ್ಚನಾ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ರಾಮದುರ್ಗದ ಸುರಕೋಡರ ನಿವಾಸದಲ್ಲಿ ನಡೆದ ಈ ಸರಳ ಸಮಾರಂಭದಲ್ಲಿ ರಾಮದುರ್ಗಿನ ಜನರು ಕಿಕ್ಕಿರಿದು ನೆರೆದಿದ್ದರು.
ಈ ಸಂದರ್ಭದಲ್ಲಿ ಜಂಟೀ ನಿರ್ದೇಶಕ ಕೆ.ಎಚ್.ಚೆನ್ನೂರ,ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ,ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯ ಹಾಗೂ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಹಾಗೂ ಸ್ಥಳೀಯ ಮುಖಂಡರು,ಕನ್ನಡ ಹೋರಾಟಗಾರರು ಹಾಜರಿದ್ದು ಸುರಕೋಡರನ್ನು ಅಭಿನಂದಿಸಿದರು.