RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೆ ಸ್ಥಳೀಯರ ಸಹಕಾರ ಅತ್ಯಂತ ಅವಶ್ಯಕವಾಗಿದೆ : ಎಂ.ದೇವರಾಜ

ಗೋಕಾಕ:ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೆ ಸ್ಥಳೀಯರ ಸಹಕಾರ ಅತ್ಯಂತ ಅವಶ್ಯಕವಾಗಿದೆ : ಎಂ.ದೇವರಾಜ 

ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೆ ಸ್ಥಳೀಯರ ಸಹಕಾರ ಅತ್ಯಂತ ಅವಶ್ಯಕವಾಗಿದೆ : ಎಂ.ದೇವರಾಜ

 
ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಅ 10 :

 

 

ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೆ ಸ್ಥಳೀಯರ ಸಹಕಾರ ಅತ್ಯಂತ ಅವಶ್ಯಕವಾಗಿದೆ ಎಂದು ಮೂಡಲಗಿ ಕೇಂದ್ರದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಎಂ.ದೇವರಾಜ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ದುರ್ಗಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಮೂಡಲಗಿ ಕೇಂದ್ರ ಹಾಗೂ ಕೌಜಲಗಿ ವಲಯದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಗುರುವಾರ ಅ.10 ರಂದು ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಆಯೋಜನೆಯ ಹಿನ್ನಲೆಯಲ್ಲಿ ಹಮ್ಮಿಕೊಂಡ ಪೂರ್ವಭಾವಿ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೆಟಗೇರಿ ಗ್ರಾಮದಲ್ಲಿ ಬರುವ ಅ.17ರಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. 101 ನವ ದಂಪತಿಗಳು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಲಾಗುವುದು. ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ವಿವಿಧ ಸ್ಟಾಲ್‍ಗಳನ್ನು ಹಾಕಲಾಗುವುದು ಸ್ಥಳೀಯ ಗ್ರಾಮಸ್ಥರು ವಿವಿಧ ಸ್ಟಾಲ್‍ಗಳಲ್ಲಿ ದೊರಕುವ ವಿವಿಧ ಸೌಲಭ್ಯಗಳ ಸದುಪಯೋಗಪಡೆದುಕೊಳ್ಳಬೇಕು ಎಂದು ಯೋಜನಾಧಿಕಾರಿ ಎಂ.ದೇವರಾಜ ತಿಳಿಸಿದರು.
ಮೂಡಲಗಿ ಕೇಂದ್ರ ವ್ಯಾಪ್ತಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೌಜಲಗಿ ವಲಯಾಧಿಕಾರಿ ಬಾಬುರಾವ ಗೋಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಮಹಿಳಾ ಸ್ವ ಸಹಾಯ ಸಂಘಗಳ, ಒಕ್ಕೂಟದ ಪ್ರತಿನಿಧಿಗಳಿಗೆ, ಸದಸ್ಯರಿಗೆ, ಸ್ಥಳೀಯ ಹಿರಿಯರಿಗೆ, ಮಹಿಳೆಯರಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಹಲವಾರು ರೂಪರೇಶಗಳನ್ನು ತಿಳಿಸಿದರು.
ಈ ವೇಳೆ ರವಿ ಉಪ್ಪಾರ, ವಿಜಯ ಮಠದ, ಬಸವರಾಜ ಕರಿಗಾರ, ನಾಗಮ್ಮ ನಾಯ್ಕರ, ಅಂಜನಾ ಬಡಿಗೇರ, ಶಿವನಗೌಡ ಪಾಟೀಲ, ಮಹಾದೇವಿ ತೋಟಗಿ, ಶಿವಕ್ಕ ನಾಡಗೌಡ್ರ, ಭಾರತಿ ಗುದಗನ್ನವರ, ಮಧು ತಲ್ಲೂರ, ಸುಜಾತ ಮಠದ, ಮೂಡಲಗಿ ಕೇಂದ್ರ ಹಾಗೂ ಕೌಜಲಗಿ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಮಹಿಳಾ ಸ್ವ ಸಹಾಯ ಸಂಘಗಳ, ಒಕ್ಕೂಟದ ಪ್ರತಿನಿಧಿಗಳು, ಸದಸ್ಯರು, ಸ್ಥಳೀಯ ಹಿರಿಯರು, ಗಣ್ಯರು, ಮಹಿಳೆಯರು, ಇತರರು ಇದ್ದರು.

Related posts: