RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಅಯೋಧ್ಯೆ ,ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಸ್ವಾಗತಾರ್ಹವಾಗಿದೆ : ಮಾಜಿ ಸಚಿವ ರಮೇಶ

ಗೋಕಾಕ:ಅಯೋಧ್ಯೆ ,ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಸ್ವಾಗತಾರ್ಹವಾಗಿದೆ : ಮಾಜಿ ಸಚಿವ ರಮೇಶ 

ಅಯೋಧ್ಯೆ ,ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಸ್ವಾಗತಾರ್ಹವಾಗಿದೆ : ಮಾಜಿ ಸಚಿವ ರಮೇಶ

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ನ 9 :

 
ಅಯೋಧ್ಯೆ ರಾಮ ಜನ್ಮಭೂಮಿ ಜಮೀನು ವಿವಾದದ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಸ್ವಾಗತಾರ್ಹವಾಗಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಭಾರತ ದೇಶ ಶಾಂತಿ ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಶಾಂತಿ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ. ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ. ಈ ಐತಿಹಾಸಿಕ ತೀರ್ಪನ್ನು ಖಂಡಿತವಾಗಿಯೂ ಸೋಲು ಅಥವಾ ಗೆಲುವಿನ ದೃಷ್ಟಿಕೋನದಲ್ಲಿ ನೋಡಬಾರದು. ಸುಪ್ರೀಂ ಕೋರ್ಟ ಇಂದು ಐತಿಹಾಸಿಕ ತೀರ್ಪು ಪ್ರಕಟಿಸಿ 134 ವರ್ಷಗಳ ಹಳೆಯದಾದ ಅಯೋಧ್ಯೆ ಭೂ ವಿವಾದ ಪ್ರಕರಣಕ್ಕೆ ಅಂತ್ಯ ಹಾಡಿರುವುದು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.


 

Related posts: