RNI NO. KARKAN/2006/27779|Sunday, June 15, 2025
You are here: Home » breaking news » ಗೋಕಾಕ:ರಮೇಶ ಜಾರಕಿಹೊಳಿ ಪರ ಮತಯಾಚಿಸಿದ ಸಚಿವೆ ಶಶಿಕಲಾ ಜೊಲ್ಲೆ

ಗೋಕಾಕ:ರಮೇಶ ಜಾರಕಿಹೊಳಿ ಪರ ಮತಯಾಚಿಸಿದ ಸಚಿವೆ ಶಶಿಕಲಾ ಜೊಲ್ಲೆ 

ರಮೇಶ ಜಾರಕಿಹೊಳಿ ಪರ ಮತಯಾಚಿಸಿದ ಸಚಿವೆ ಶಶಿಕಲಾ ಜೊಲ್ಲೆ

 
ಗೋಕಾಕ ಹಿರೇನಂದಿ, ಹಣಮಾಪೂರ, ಹೂಲಿ ಕ್ಷೇತ್ರದ ಮಾಲದಿನ್ನಿ. ಉಪ್ಪಾರಹಟ್ಟಿ, ಮಮದಾಪೂರ, ಮರಡಿಶಿವಾಪೂರ, ಅಜ್ಜನಕಟ್ಟಿ, ಪಂಚನಾಯಕನಹಟ್ಟಿ, ಚಿಕ್ಕನಂದಿ, ಕಟ್ಟಿ ಗ್ರಾಮಗಳಲ್ಲಿ ಮತಯಾಚನೆ.

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ನ 25 :

 
ರಮೇಶ ಜಾರಕಿಹೊಳಿ ಅವರನ್ನು ಆಯ್ಕೆ ಮಾಡುವುದರಿಂದ ಕ್ಷೇತ್ರದ ಸಮಗ್ರ ಅಭಿವೃದ್ದಿಯಾಗುತ್ತದೆ. ಮುಂದೆ ಅವರಿಗೆ ಬಿಜೆಪಿ ಸರ್ಕಾರದಲ್ಲಿ ಮಹತ್ವದ ಸಚಿವಸ್ಥಾನ ಲಭಿಸುತ್ತದೆ. ನಾವಿಂದು ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿರುವುದಕ್ಕೆ ರಮೇಶ ಜಾರಕಿಹೊಳಿ ಅವರ ತ್ಯಾಗ ಹಾಗೂ ಕೃಪೆ ಕಾರಣವೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಗೋಕಾಕ ಕ್ಷೇತ್ರದ ಉಸ್ತುವಾರಿಯಾಗಿರುವ ಶಶಿಕಲಾ ಜೊಲ್ಲೆ ಹೇಳಿದರು.
ಸೋಮವಾರದಂದು ತಾಲೂಕಿನ ಮಾಲದಿನ್ನಿ, ಉಪ್ಪಾರಹಟ್ಟಿ ಹಾಗೂ ಮಮದಾಪೂರ ಗ್ರಾಮಗಳಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಗಳಲ್ಲಿ ರಮೇಶ ಜಾರಕಿಹೊಳಿ ಪರ ಮತಯಾಚಿಸಿ ಅವರು ಮಾತನಾಡುತ್ತಿದ್ದರು.
ಕಾರ್ಯಕರ್ತರೇ ಬಿಜೆಪಿಗೆ ಆಸ್ತಿಯಾಗಿದ್ದಾರೆ ಜೊತೆಗೆ ದೊಡ್ಡ ಶಕ್ತಿಯಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದ್ದು, ಬಾಕಿ ಉಳಿದಿರುವ ಅವಧಿಯನ್ನು ನಮ್ಮ ಸರ್ಕಾರ ಪೂರ್ಣಗೊಳಿಸಬೇಕಾದರೇ ಡಿಸೆಂಬರ್-5ರಂದು ನಡೆಯುವ ಉಪಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಅವರನ್ನು ಅತ್ಯಧಿಕ ಮತಗಳಿಂದ ಆಯ್ಕೆ ಮಾಡುವಂತೆ ಮನವಿ ಮಾಡಿಕೊಂಡರು.
ರಮೇಶ ಜಾರಕಿಹೊಳಿ ಅವರು ಕಾಂಗ್ರೇಸ್ ಪಕ್ಷದಲ್ಲಿ 2ದಶಕಗಳಿಂದ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದವರು. ಅಧಿಕಾರದ ಹಿಂದೆ ಎಂದಿಗೂ ಜೋತು ಬೀಳದ ಮನೋಭಾವದವರಲ್ಲ ಆದರೆ ಜೆಡಿಎಸ್-ಕಾಂಗ್ರೇಸ್ ಮೈತ್ರಿ ಸರ್ಕಾರದ ಜನವಿರೋಧಿ ಹಾಗೂ ಭೃಷ್ಟ ಆಡಳಿತಕ್ಕೆ ಬೇಸತ್ತು, ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿಸಲಿಕ್ಕೆ ಬಿಜೆಪಿಗೆ ಬಂದು ರಾಜ್ಯದಲ್ಲಿ ದೊಡ್ಡ ಶಕ್ತಿಯನ್ನೇ ತೋರಿಸಿದ್ದಾರೆ. ಅವರ ಕಮಲ ಗುರ್ತಿಗೆ ಮತ ನೀಡಿ ಪ್ರಚಂಡ ಬಹುಮತದಿಂದ ಆರಿಸಿ ತರುವಂತೆ ಮನವಿ ಮಾಡಿಕೊಂಡರು.
ಶಾಸಕ ಹಾಗೂ ಇನ್ನೂರ್ವ ಉಸ್ತುವಾರಿ ಎ.ಎಸ್.ಪಾಟೀಲ(ನಡಹಳ್ಳಿ) ಮಾತನಾಡಿ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಲ್ಲಿ ಜಾರಕಿಹೊಳಿ ಸಹೋದರರ ಪಾತ್ರ ಮಹತ್ವದ್ದಾಗಿದೆ. 2008ರಲ್ಲಿ ಬಿಜೆಪಿಗೆ ಮೂರು ಸ್ಥಾನಗಳು ಕೊರತೆಯಾದಾಗ ಬಾಲಚಂದ್ರ ಜಾರಕಿಹೊಳಿ ಅವರು ಯಡಿಯೂರಪ್ಪನವರಿಗೆ ಶಕ್ತಿ ತುಂಬಿದ್ದರು. ಈಗ ರಮೇಶ ಜಾರಕಿಹೊಳಿ ಅವರು ರೈತ ನಾಯಕ ಬಿ.ಎಸ್.ಯಡಿಯೂರಪ್ಪನವರಿಗೆ ಆಸರೆಯಾಗುವ ಮೂಲಕ ಸರ್ಕಾರ ರಚನೆಗೆ ಕಾರಣರಾಗಿದ್ದಾರೆ. ಕೆಲವರು ರಮೇಶ ಅವರಿಗೆ ತೋಳ ಬಂತು ತೋಳವೆಂದು ಅಪಹಾಸ್ಯ ಮಾಡುತ್ತಿದ್ದಾರೆ. ಅವರಿಗೀಗ ಉತ್ತರ ನೀಡಲು ಕಾಲ ಸನ್ನಿತವಾಗಿದ್ದು ರಮೇಶ ಅವರು ಗೋಕಾಕದ ಹುಲಿ ಎಂದು ತೋರಿಸಿಕೊಡಲು ಪ್ರಚಂಡ ಬಹುಮತದಿಂದ ಆಯ್ಕೆ ಮಾಡುವಂತೆ ಕೋರಿದರು.
ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ, ಸವದತ್ತಿ ಶಾಸಕ ಆನಂದ ಮಾಮನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ|| ವಿಶ್ವನಾಥ ಪಾಟೀಲ, ಉಪಾಧ್ಯಕ್ಷ ಶಾಮಾನಂದ ಪೂಜೇರಿ, ಮಹಾಂತೇಶ ತಾವಂಶಿ, ಗೋವಿಂದ ಕೊಪ್ಪದ, ಸುಭಾಶ ಪಾಟೀಲ ಹಾಗೂ ಆಯಾ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.
ನಂತರ ಮರಡಿಶಿವಾಪೂರ, ಅಜ್ಜನಕಟ್ಟಿ, ಪಂಚನಾಯಕನಹಟ್ಟಿ, ಚಿಕ್ಕನಂದಿ, ಹಿರೇನಂದಿ, ಹಣಮಾಪೂರ, ಹೂಲಿಕಟ್ಟಿ ಗ್ರಾಮಗಳಿಗೆ ತೆರಳಿ ರಮೇಶ ಜಾರಕಿಹೊಳಿ ಪರ ಪಾದಯಾತ್ರೆ ನಡೆಸಿ ಮತಯಾಚಿಸಿದರು.

Related posts: