RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ;ಬಲಿಷ್ಠ ಭಾರತ ನಿರ್ಮಾಣಕ್ಕೆ ಬಿಜೆಪಿಯನ್ನು ಬೆಂಬಲಿಸಿ-ಕೇಂದ್ರ ಸಚಿವ ಸುರೇಶ ಅಂಗಡಿ

ಗೋಕಾಕ;ಬಲಿಷ್ಠ ಭಾರತ ನಿರ್ಮಾಣಕ್ಕೆ ಬಿಜೆಪಿಯನ್ನು ಬೆಂಬಲಿಸಿ-ಕೇಂದ್ರ ಸಚಿವ ಸುರೇಶ ಅಂಗಡಿ 

ಬಲಿಷ್ಠ ಭಾರತ ನಿರ್ಮಾಣಕ್ಕೆ ಬಿಜೆಪಿಯನ್ನು ಬೆಂಬಲಿಸಿ-ಕೇಂದ್ರ ಸಚಿವ ಸುರೇಶ ಅಂಗಡಿ

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ನ 29 :

 

ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಬಿಜೆಪಿಯನ್ನು ಈ ಉಪಚುನಾವಣೆಯಲ್ಲಿ ಬೆಂಬಲಿಸುವಂತೆ ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಅವರು ಶುಕ್ರವಾರದಂದು ಗೋಕಾಕ ಮತಕ್ಷೇತ್ರದ ಹಿರೇನಂದಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಪರ ಮತಯಾಚಿಸಿ ಮಾತನಾಡಿದರು.
ಭವ್ಯ ಭಾರತದ ಕಲ್ಪನೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ವಿಶೇಷ ಯೋಜನೆಗಳ ಅನುಷ್ಠಾನದೊಂದಿಗೆ ಶ್ರಮಿಸುತ್ತಿದ್ದಾರೆ.ರಾಜ್ಯದಲ್ಲಿಯೂ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಜನಪರ ಯೋಜನೆಗಳೊಂದಿಗೆ ರಾಜ್ಯದ ಅಭಿವೃದ್ಧಿಗಾಗಿ ಕಾರ್ಯ ಪ್ರವೃತ್ತರಾಗಿದ್ದು ಅವರ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಮತವನ್ನು ನೀಡಿ ಆಶೀರ್ವದಿಸಬೇಕೆಂದು ಕೋರಿದರು.
ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ರಮೇಶ ಜಾರಕಿಹೊಳಿ ಅವರು ಎಲ್ಲ ವರ್ಗಗಳ ಜನರೊಂದಿಗೆ ಬೆರೆತು ಜಾತ್ಯಾತೀತವಾಗಿ ಕ್ಷೇತ್ರದ ಅಭಿವೃದ್ಧಿ ಮಾಡಿದ್ದಾರೆ. ಆದರೆ ಕಾಂಗ್ರೇಸ್ ಸರ್ಕಾರ ಇವರಿಗೆ ಅನ್ಯಾಯ ಮಾಡಿದ್ದು ಆ ಅನ್ಯಾಯಕ್ಕೆ ಪ್ರತೀಕಾರ ತೋರಿಸಲು ರಮೇಶ ಅವರು ಯಡಿಯೂರಪ್ಪ ಅವರನ್ನು ಮೆಚ್ಚಿ ಸರ್ಕಾರ ರಚನೆಗೆ ಬಹುಮೂಲ್ಯ ಕೊಡುಗೆ ನೀಡಿದ್ದಾರೆ. ಎಂದು ಹೇಳಿದರು.
ಸವದತ್ತಿ ಶಾಸಕ ಆನಂದ ಮಾಮನಿ ಮಾತನಾಡಿ, ರಾಜ್ಯದಲ್ಲಿ ಯಡಿಯೂರಪ್ಪನವರ ಸರ್ಕಾರವನ್ನು ಬಲಪಡಿಸಲು ಅವರಿಗೆ ನೈತಿಕ ಶಕ್ತಿ ತುಂಬಲು ರಮೇಶ ಜಾರಕಿಹೊಳಿ ಅವರ ಆಯ್ಕೆ ಅಗತ್ಯವಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳು ಮತ್ತು ರಮೇಶ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮನಗಂಡು ಮತದಾರರು ಬಿಜೆಪಿಯನ್ನು ಬೆಂಬಲಿಸುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದರು. 75ಸಾವಿರ ಮತಗಳ ಅಂತರದೊಂದಿಗೆ 6ನೇ ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಲಿದ್ದು ಇವರು ಸರ್ಕಾರದಲ್ಲಿ ಸಚಿವರಾಗಲಿದ್ದಾರೆ ಎಂದು ಹೇಳಿದರು.
ಮಾಜಿ ಶಾಸಕರಾದ ಡಾ: ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಳಪ್ಪ ಹೊಸಮನಿ, ಬಿಜೆಪಿ ಮುಖಂಡ ಈರಪ್ಪ ಕಡಾಡಿ, ಪ್ರಭಾ ಶುಗರ್ ಅಧ್ಯಕ್ಷ ಅಶೋಕ ಪಾಟೀಲ, ಗೋವಿಂದ ಕೊಪ್ಪದ,ಲಕ್ಷ್ಮಣ ತಪಸಿ,ಶಾಮಾನಂದ ಪೂಜೇರಿ ಸೇರಿದಂತೆ ಮುಂತಾದವರು ಇದ್ದರು.

Related posts: