ಗೋಕಾಕ:ಅನರ್ಹ ಶಾಸಕರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ಚೂರಿ ಹಾಕಿದ್ದಾರೆ : ಕೆ.ಸಿ.ವೇಣುಗೋಪಾಲ್

ಅನರ್ಹ ಶಾಸಕರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ಚೂರಿ ಹಾಕಿದ್ದಾರೆ : ಕೆ.ಸಿ.ವೇಣುಗೋಪಾಲ್
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 2 :
ಅನರ್ಹ ಶಾಸಕರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹೇಳಿದರು
ಸೋಮವಾರದಂದು ನಗರ ಕಾಂಗ್ರೆಸ್ ಅಭ್ಯರ್ಥಿ ಲಖನ ಜಾರಕಿಹೊಳಿ ಅವರ ಗೃಹ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆದು ಆಯ್ಕೆಯಾಗಿದ್ದ ಅನರ್ಹ ಶಾಸಕರು ಜನರಿಗೆ ಮೋಸ ಮಾಡಿದ್ದಾರೆ
ಇವರು ಕುದುರೆ ವ್ಯಾಪಾರದ ಒಂದು ಭಾಗವಾಗಿದ್ದಾರೆ ಹೀಗಾದರೆ ಪ್ರಜಾಪ್ರಭುತ್ವದ ಅರ್ಥ ಏನು? ಎಂದು ಪ್ರಶ್ನಿಸಿದ ವೇಣುಗೋಪಾಲ ಅವರು ಕಳೆದ ಬಾರಿ ಗುಜರಾತ್, ಮಹಾರಾಷ್ಟ್ರ ಉಪಚುನಾವಣೆಯಲ್ಲಿ ಪಕ್ಷಾಂತರಿಗಳಿಗೆ ಅಲ್ಲಿನ ಜನರು ತಕ್ಕ ಪಾಠ ಕಲಿಸಿದ್ದಾರೆ ಅದೇ ರೀತಿ ಕರ್ನಾಟಕದಲ್ಲೂ ಪಕ್ಷಾಂತರಿಗಳಿಗೆ ಪಾಠ ಜನ ಕಲಿಸುತ್ತಾರೆ ದೇಶದಲ್ಲಿ ಕುದುರೆ ವ್ಯಾಪಾರ ನಡೆಯುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಅಮಿತ್ ಷಾ ನೇತೃತ್ವದಲ್ಲಿ ಕರ್ನಾಟಕದಲ್ಲಿ ಎಂಎಲ್ಎಗಳ ಕುದುರೆ ವ್ಯಾಪಾರ ನಡೆದಿದೆ.
ಪ್ರವಾಹದಿಂದ ಬೆಳಗಾವಿ ಜಿಲ್ಲೆ ಅದರಲ್ಲೂ ಗೋಕಾಕ್ ನಲ್ಲಿ ಜನ ಕಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸರಿಯಾಗಿ ನೆರೆಸಂತ್ರಸ್ತರ ಸಹಾಯಕ್ಕೆ ಧಾವಿಸಿಲ್ಲ ಆದರೆ ಸತೀಶ್ ಜಾರಕಿಹೊಳಿ ನೆರೆ ಸಂತ್ರಸ್ತರ ನೆರವಿಗೆ ಬಂದು ನೆರೆ ಸಂತ್ರಸ್ತರ ಕಷ್ಟದಲ್ಲಿ ಭಾಗಿಯಾಗಿದ್ದಾರೆ ಈಗ ಮತಕೇಳಲು ಬರುವ ಗೋಕಾಕ್ ಬಿಜೆಪಿ ಅಭ್ಯರ್ಥಿ ಪ್ರವಾಹ ವೇಳೆ ಎಲ್ಲಿ ಇದ್ರು ಎಂದು ಕೆ.ಸಿ.ವೇಣುಗೋಪಾಲ್ ರಮೇಶ ಜಾರಕಿಹೊಳಿ ವಿರುದ್ಧ ಆರೋಪ ಮಾಡಿದರು .ಮೋನ್ನೆ ನಡೆದ ನಾಟಕೀಯ ಬೆಳವಣಿಗೆ ಎಲ್ಲಿ ಮಹಾರಾಷ್ಟ್ರದಲ್ಲಿ ಕೊನೆಗೂ ಪ್ರಜಾಪ್ರಭುತ್ವದ ಗೆಲುವಾಗಿದೆ. ಅದೇ ರೀತಿ ಕರ್ನಾಟಕದಲ್ಲೂ ಆಗುತ್ತೆ ನಮ್ಮ ನಿಲುವು ಸ್ಪಷ್ಟ, ನಾವು ಬಿಜೆಪಿ ವಿರುದ್ಧ ಇದ್ದೇವೆ ಅಧಿಕಾರದಿಂದ ಬಿಜೆಪಿ ದೂರವಿಡಲು ಎಲ್ಲ ರೀತಿ ದಾರಿಗಳು ತೆರೆದಿವೆ
ಮತ್ತೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಆದ್ರೆ ಸಿದ್ದರಾಮಯ್ಯ ಹೊರಗಿಬೇಕು ಅಂತಾ ಜೆಡಿಎಸ್ ಪ್ರಸ್ತಾಪ ಇಟ್ಟಿದೆಯಾ ಅಂತಾ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ವೇಣುಗೋಪಾಲ ಇಲ್ಲ ಸಿದ್ದರಾಮಯ್ಯ, ಡಿಕೆಶಿ, ಪರಮೇಶ್ವರ್ ಎಲ್ಲರೂ ಒಗ್ಗಟ್ಟಾಗಿದ್ದಾರೆ ಎಂದು ಹೇಳಿದರು
ಪತ್ರಿಕಾಗೋಷ್ಠಿಯಲ್ಲಿ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ, ಲಕ್ಷ್ಮಣರಾವ್ ಚಿಂಗಳೆ , ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.