ಗೋಕಾಕ:ಲಕ್ಷ್ಮೀ ದೇವಿ ದರ್ಶನ ಪಡೆದ ನೂತನ ಶಾಸಕ ರಮೇಶ್ ಜಾರಕಿಹೊಳಿ : ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ಬೆಂಬಲಿಗರು

ಲಕ್ಷ್ಮೀ ದೇವಿ ದರ್ಶನ ಪಡೆದ ನೂತನ ಶಾಸಕ ರಮೇಶ್ ಜಾರಕಿಹೊಳಿ : ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ಬೆಂಬಲಿಗರು
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಡಿ 9:
ಗೋಕಾಕ ಮತಕ್ಷೆತ್ರದಲ್ಲಿ ಮೊದಲ ಬಾರಿ ಕಮಲ ಅರಳಲು ಕಾರಣೀಕರ್ತರಾದ ನೂತನ ಶಾಸಕ ರಮೇಶ ಜಾರಕಿಹೊಳಿ ಅವರ ಅಭೂತಪೂರ್ವ ಗೆಲುವಿನಿಂದ ಗೋಕಾಕ ಮತಕ್ಷೇತ್ರದಾದ್ಯಂತ ಸಂಭ್ರಮ ಮನೆ ಮಾಡಿದೆ.
ಫಲಿತಾಂಶ ಘೋಷಣೆ ಯಾದಾಗಿನಿಂಲೂ ಕ್ಷೇತ್ರದಾದ್ಯಂತ ಗೆಲುವಿನ ಸಂಭ್ರಮ ಆಚರಣೆಯಲ್ಲಿ ತೊಡಗಿರುವ ಬೆಂಬಲಿಗರ ನೂತನ ಶಾಸಕ ರಮೇಶ್ ಜಾರಕಿಹೊಳಿ ಪ್ರಮಾಣ ಪತ್ರ ತಗೆದುಕೊಂಡು ನಗರಕ್ಕೆ ಆಗಮಿಸುತ್ತಿದ್ದಂತೆ ರಮೇಶ ಪರ ಜಯ
ಘೋಷಣೆನ್ನು ಕೂಗಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು
ನಗರದ ಲಕ್ಷ್ಮೀ ದೇವಸ್ಥಾನಕ್ಕೆ ಬೇಟಿ ನೀಡಿದ ನೂತನ ಶಾಸಕ ರಮೇಶ ಜಾರಕಿಹೊಳಿ ಅವರು ಗ್ರಾಮ ದೇವತೆ ಲಕ್ಷ್ಮೀ ದೇವಿಯ ಆರ್ಶಿವಾದ ಪಡೆದರು. ನಂತರ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಅವರು ಬಸವೇಶ್ವರ ಪುಥಳಿಗೆ ಮಾರ್ಲಾಪಣೆ ಮಾಡಿದರು.
ಈ ಸಂದರ್ಭದಲ್ಲಿ ನೂತನ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಅವರ ಅಫಾರ ಬೆಂಬಲಿಗರು ಸಾಥ್ ನೀಡಿದರು
.