ಗೋಕಾಕ:ಬಸವೇಶ್ವರ ಸೌಹಾರ್ದ ಸಹಕಾರಿಯೂ ಹಲವಾರು ಸಮಾಜಮುಖಿ ಕಾರ್ಯಕೈಗೊಳ್ಳುತ್ತ ಸಾಗಿದೆ : ಅಭಿನವ ಶಿವಾನಂದ ಸ್ವಾಮಿಜಿ

ಬಸವೇಶ್ವರ ಸೌಹಾರ್ದ ಸಹಕಾರಿಯೂ ಹಲವಾರು ಸಮಾಜಮುಖಿ ಕಾರ್ಯಕೈಗೊಳ್ಳುತ್ತ ಸಾಗಿದೆ : ಅಭಿನವ ಶಿವಾನಂದ ಸ್ವಾಮಿಜಿ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಡಿ 16 :
ಗ್ರಾಮದ ಬಸವೇಶ್ವರ ಸೌಹಾರ್ದ ಸಹಕಾರಿ ಪ್ರಕಟಿಸಿದ 2020ನೇ ಸಾಲಿನ ಬಸವಶ್ರೀ ದಿನದರ್ಶಿಕೆ ವಿಭಿನ್ನ, ಆಕರ್ಷಕವಾಗಿದೆ ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮಿಜಿ ಹೇಳಿದರು.
ಗ್ರಾಮದ ಬಸವೇಶ್ವರ ಸೌಹಾರ್ದ ಸಹಕಾರಿ ಕಾರ್ಯಾಲಯದಲ್ಲಿ ಸೋಮವಾರ ಡಿ.16 ರಂದು ನಡೆದ 2020ನೇ ವರ್ಷದ ಬಸವಶ್ರೀ ದಿನದರ್ಶಿಕೆ ಬಿಡುಗಡೆಗೊಳಿಸಿ ಮಾತನಾಡಿ, ಪಾರದರ್ಶತೆ ಹಾಗೂ ವಿಶ್ವಾಸದ ಪ್ರತಿಬಿಂಬವಾಗಿರುವ ಇಲ್ಲಿಯ ಬಸವೇಶ್ವರ ಸೌಹಾರ್ದ ಸಹಕಾರಿಯೂ ಹಲವಾರು ಸಮಾಜಮುಖಿ ಕಾರ್ಯಕೈಗೊಳ್ಳುತ್ತ ಸಾಗಿದೆ. ಮುಂದೆಯೂ ಜನಪರ ಕಾರ್ಯಕೈಗೊಳ್ಳಲಿ ಎಂದು ಹಾರೈಸಿದರು.
ಸ್ಥಳೀಯ ಬಸವೇಶ್ವರ ಸೌಹಾರ್ದ ಸಹಕಾರಿಯ ಅಧ್ಯಕ್ಷ ಮಲ್ಲಿಕಾರ್ಜುನ ನೀಲಣ್ಣವರ ಅಧ್ಯಕ್ಷತೆ ವಹಿಸಿದ್ದರು. ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ ಸಮ್ಮುಖ ವಹಿಸಿದ್ದರು. ಈ ವೇಳೆ ಆಡಳಿತ ಮಂಡಳಿ ವತಿಯಿಂದÀ ಶ್ರೀಗಳನ್ನು, ಗಣ್ಯರನ್ನು ಸನ್ಮಾನಿಸಲಾಯಿತು.
ಕಲ್ಲಪ್ಪ ಹುಬ್ಬಳ್ಳಿ, ಈಶ್ವರ ಬಡಿಗೇರ, ಶಿವನಪ್ಪ ಕಂಬಿ, ಶಿವು ಮೇಳೆನ್ನವರ, ಅಶೋಕ ದೇಯನ್ನವರ, ಅಪ್ಪಯ್ಯಪ್ಪ ಸಿದ್ನಾಳ, ಬಸವರಾಜ ಮಾಳೇದ, ವೀರಭದ್ರ ದಂಡಿನ, ಮುಖ್ಯ ಕಾರ್ಯನಿರ್ವಾಹಕ ಈರಣ್ಣ ಸಿದ್ನಾಳ, ಗುಳಪ್ಪ ಪಣದಿ, ಬಸವರಾಜ ದಂಡಿನ, ಮಂಜು ಕಂಬಿ, ಸಹಕಾರಿಯ ಆಡಳಿತ ಮಂಡಳಿ ಸದಸ್ಯರು, ಗ್ರಾಹಕರು, ಗ್ರಾಮಸ್ಥರು ಇದ್ದರು.