ಗೋಕಾಕ:ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ : ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು
ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ : ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಡಿ 25 :
ಶಿಕ್ಷಕರೇ ನಿಜವಾದ ಪ್ರವಚನಕಾರರಾಗಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಅವರನ್ನು ಒಳ್ಳೆಯ ನಾಗರೀಕರನ್ನಾಗಿ ಮಾಡುವಂತೆ ಹುಕ್ಕೇರಿಯ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಬುಧವಾರದಂದು ನಗರದ ಶ್ರೀ ವೆಂಕಟೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಗುರು-ಮಾರ್ಗ ಸಂಸ್ಥೆಯ 9ನೇ ವಾರ್ಷಿಕೋತ್ಸವ ನಿಮಿತ್ಯ ಶಿಕ್ಷಕರ ಸನ್ಮಾನ ಸಮಾರಂಭ ಹಾಗೂ ಗುರು-ಮಾರ್ಗ ಪ್ರಕಾಶನದಿಂದ ಸಿರಿಗನ್ನಡ ಮಹಿಳಾ ವೇದಿಕೆಯ ರಾಜ್ಯ ಉಪಾಧ್ಯಕ್ಷೆ ರಜನಿ ಜೀರಗ್ಯಾಳ ಅವರು ರಚಿಸಿದ ಬದುಕೆಂದರೇ ಇಷ್ಟೇನೆ? ಎಂಬ ಕವನ ಸಂಕಲನ ಪುಸ್ತಕವನ್ನು ಲೋಕಾಪರ್ಣೆಗೊಳಿಸಿ ಮಾತನಾಡುತ್ತಿದ್ದರು.
ಶಿಕ್ಷಕರು ಶಿಕ್ಷಣದಲ್ಲಿ ಬದಲಾವಣೆ ತರಬೇಕು, ಮಕ್ಕಳಿಗೆ ಆಧ್ಯಾತ್ಮಿಕ ಶಿಕ್ಷಣವನ್ನು ನೀಡಿ ಅವರಲ್ಲಿ ಆತ್ಮವಿಶ್ವಾಸವನ್ನು ಬೆಳೆಸಬೇಕು. ಮಾತೃಭಾಷೆಯೊಂದಿಗೆ ಅನ್ಯ ಭಾಷೆಗಳಿಗೂ ಮಹತ್ವ ನೀಡಬೇಕು. ಪ್ಲಾಸ್ಟಿಕ್ ನಿಷೇಧ, ಪರಿಸರ ರಕ್ಷಣೆ ಕುರಿತು ಅವರಲ್ಲಿ ಅರಿವು ಮೂಡಿಸಿ ಅವರನ್ನು ಸತ್ಪಜ್ರೆಗಳನ್ನಾಗಿ ರೂಪಿಸುವಂತೆ ಕರೆ ನೀಡಿದ ಅವರು ರಜನಿ ಜೀರಗ್ಯಾಳ ಅವರು ತಮ್ಮ ಕವನ ಸಂಕಲನದಲ್ಲಿ ಹೆಣ್ಣಿನ ಶಕ್ತಿ ಸಾಮಥ್ರ್ಯಗಳನ್ನು ನಿವೇದಿಸುತ್ತಾ ಸಮಾಜದಲ್ಲಿನ ತಾರತ್ತಮ್ಯಗಳನ್ನು ವಿರೋಧಿಸುತ್ತಾ ಸ್ತ್ರೀಕುಲಕ್ಕೆ ಧ್ವನಿ ನೀಡುವ ಕಾರ್ಯವನ್ನು ಮಾಡಿದ್ದಾರೆಂದು ತಿಳಿಸಿದರು.
ವೇದಿಕೆ ಮೇಲೆ ಡಿಡಿಪಿಐ ಗಜಾನನ ಮನ್ನಿಕೇರಿ, ಬಿಇಓಗಳಾದ ಜಿ.ಬಿ.ಬಳಗಾರ, ಎ.ಸಿ.ಮನ್ನಿಕೇರಿ, ಶಿಕ್ಷಕ ವಿರೇಶ ಪಾಟೀಲ, ಗುರು-ಮಾರ್ಗ ಸಂಸ್ಥೆಯ ಅಧ್ಯಕ್ಷ ವಿರೇಂದ್ರ ಪತಕಿ, ಹಿಂದೂಳಿದ ವರ್ಗಗಳ ವಿಸ್ತ್ರರಣಾಧಿಕಾರಿ ಆರ್.ಕೆ.ಬಿಸಿರೊಟ್ಟಿ, ಪಿಡಬ್ಲೂಡಿ ಅಧಿಕಾರಿ ರಾಮಚಂದ್ರ ಗಾಣಿಗೇರ, ಡಾ.ಅಶೋಕ ಜೀರಗ್ಯಾಳ ಇದ್ದರು.
ರಾಮಚಂದ್ರ ಕಾಕಡೆ ಸ್ವಾಗತಿಸಿದರು, ಆರ್.ಎಲ್.ಮಿರ್ಜಿ ನಿರೂಪಿಸಿದರು, ಈಶ್ವರಚಂದ್ರ ಬೆಟಗೇರಿ ವಂದಿಸಿದರು.