ಗೋಕಾಕ:ಬಟ್ಟೆ ಅಂಗಡಿಗಳ ಮೇಲೆ ಸರ್ಜಿಕಲ್ ಅಟ್ಯಾಕ್ : ಪ್ಲಾಸ್ಟಿಕ್ ಚೀಲಗಳನ್ನು ಬಳಸದಂತೆ ಖಡಕ್ ಎಚ್ಚರಿಕೆ
ಬಟ್ಟೆ ಅಂಗಡಿಗಳ ಮೇಲೆ ಸರ್ಜಿಕಲ್ ಅಟ್ಯಾಕ್ : ಪ್ಲಾಸ್ಟಿಕ್ ಚೀಲಗಳನ್ನು ಬಳಸದಂತೆ ಖಡಕ್ ಎಚ್ಚರಿಕೆ
ಗೋಕಾಕ ಅ 4: ಇಲ್ಲಿನ ಕೊಣ್ಣೂರ ವಿವಿಧ ಬಟ್ಟೆ ಅಂಗಡಿಗಳಲ್ಲಿ ಪುರಸಭೆ ಸಿಬ್ಬಂದಿಗಳು ದಿಢೀರ್ ದಾಳಿ ನಡೆಸಿ ಸಾವಿರಾರು ರೂ. ಮೌಲ್ಯದ ಪಾಸ್ಟಿಕ್ ಚೀಲ್ ಗಳನ್ನು ವಶಪಡಿಸಿಕೊಂಡು ಮುಂದೆ ಪ್ಲಾಸ್ಟಿಕ್ ಚೀಲಗಳನ್ನು ಬಳಸದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧ ಹೇರಿದ ಹಿನ್ನೆಲೆ ಅಂಗಡಿ, ಮುಗ್ಗಟ್ಟುಗಳಲ್ಲಿ ಪ್ಲಾಸ್ಟಿಕ್ ಚೀಲಗಳನ್ನು ಉಪಯೋಗಿಸದಂತೆ ಹಲವು ಬಾರಿ ನೋಟಿಸ್ ನೀಡಿದರು ಮತ್ತು ಖುದ್ದು ಅಂಗಡಿಗಳಿಗೆ ಭೇಟಿ ನೀಡಿ ಮಾಲೀಕರಿಗೆ ಮನವೊಲಿಸಿದರು ಕೂಡ ಅಕ್ರಮವಾಗಿ ಪ್ಲಾಸ್ಟಿಕ್ ಚೀಲ ಬಳಸುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಈ ವೇಳೆ ಅಂಗಡಿ ಮಾಲೀಕರು ಮತ್ತು ಸಿಬ್ಬಂದಿಗಳ ನಡುವೆ ವಾಗ್ವಾದ ನಡೆದರೂ ಲೆಕ್ಕಿಸದೆ ಸಿಬ್ಬಂದಿಗಳು ಪ್ಲಾಸ್ಟಿಕ್ ಚೀಲಗಳನ್ನು ವಶಕ್ಕೆ ಪಡೆದು ಮುಂದೆ ಪ್ಲಾಸ್ಟಿಕ್ ಬಳಸಿದರೆ ಕಾನೂನಿನಡಿ ಕ್ರಮ ಕೈಗೊಳ್ಳುವುದಾಗಿ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಗಳಾದ ಶಿವಾನಂದ ಹಿರೆಮಠ, ರಮೇಶ ಬವಾನೆ, ಮಠದ, ಯಮಕನಮರ್ಡಿ ಇತರರು ಇದ್ದರು