RNI NO. KARKAN/2006/27779|Thursday, March 28, 2024
You are here: Home » breaking news » ಬೆಟಗೇರಿ:ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು : ಸಿಪಿಐ ವೆಂಕಟೇಶ ಮುರನಾಳ

ಬೆಟಗೇರಿ:ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು : ಸಿಪಿಐ ವೆಂಕಟೇಶ ಮುರನಾಳ 

ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು : ಸಿಪಿಐ ವೆಂಕಟೇಶ ಮುರನಾಳ

 

 

 

ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಎ 11 :

 

 
ದೇಶಾದ್ಯಂತ ಮಹಾಮಾರಿ ಕರೊನಾ ವೈರಸ್ ದಿನದಿಂದ ದಿನ ಹೆಚ್ಚುತ್ತಿದೆ. ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮಾಸ್ಕ್ ಧರಿಸಬೇಕು. ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮನುಷ್ಯನಿಗೆ ಜೀವವಿದ್ದರೆ ಜೀವನ, ಕರೊನಾ ವೈರಸ್ ನಿಯಂತ್ರಣಾ ಕ್ರಮಗಳನ್ನು ತಪ್ಪದೇ ಅನುಸರಿಸಬೇಕು ಎಂದು ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ಹೇಳಿದರು.
ಮೆಳವಂಕಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಬೆಟಗೇರಿ ಗ್ರಾಮಕ್ಕೆ ಶುಕ್ರವಾರ ಏ.10ರಂದು ಭೇಟಿ ನೀಡಿ, ಗ್ರಾಮದಲ್ಲಿ ಕರೊನಾ ವೈರಸ್ ತಡೆಗಟ್ಟಲು ಕೈಗೊಂಡ ಮುಂಜಾಗ್ರತಾ ಕ್ರಮಗಳ ಮಾಹಿತಿ ಪಡೆದ ಬಳಿಕ ಮಾತನಾಡಿ, ಕರೊನಾ ವೈರಸ್ ನಿಯಂತ್ರಣಾ ಕ್ರಮಗಳ ಕುರಿತು ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸ್ಥಳೀಯರಲ್ಲಿ ಜಾಗೃತಿ ಮೂಡಿಸುತ್ತಿರುವ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ದೇಶಾದ್ಯಂತ ಹರಡುತ್ತಿರುವ ಮಹಾಮಾರಿ ಕರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಎನ್‍ಎಸ್‍ಎಫ್ ತಂಡ ಗ್ರಾಮದಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಹಾಗೂ ಇಲ್ಲಿಯ ಸಾರ್ವಜನಿಕರ ಸ್ಥಿತಿಗತಿಗಳ ಕುರಿತು ಗ್ರಾಪಂ ಅಧ್ಯಕ್ಷ-ಸದಸ್ಯರು ಮತ್ತು ಪಿಎಚ್‍ಸಿ ಸಿಬ್ಬಂದಿ ಜೋತೆ ಹ¯ವಾರು ಸಂಗತಿಗಳ ಕುರಿತು ಚರ್ಚಿಸಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಹಯೋಗದಲ್ಲಿ ನೀಡುತ್ತಿರುವ ಉಚಿತ ಮಾಸ್ಕ್‍ಗಳನ್ನು ಸ್ಥಳೀಯರಿಗೆ ವಿತರಿಸಿದರು.
ನಿರಂತರ ಸೇವೆಗೆ ಶ್ಲಾಘನೆ: ಸ್ಥಳೀಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವೆಚಾರಕ ಬಸವರಾಜ ಪಣದಿ ಪ್ರಾಸ್ತಾವಿಕವಾಗಿ ಮಾತನಾಡಿ, ಕರೊನಾ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳ ಕುರಿತು ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಕರೋನಾ ಸೈನಿಕರು, ವೈದ್ಯಕೀಯ ವಿವಿಧ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಗ್ರಾಪಂ ಮತ್ತು ಪಿಎಚ್‍ಸಿ ಸಿಬ್ಬಂದಿ ಹಲವಾರು ಕಾರ್ಯಕ್ರಮಗಳ ಆಯೋಜನೆಯ ಮೂಲಕ ಸ್ಥಳೀಯರಲ್ಲಿ ನಿರಂತರ ಜನ ಜಾಗೃತಿ ಮೂಡಿಸುತ್ತಿರುವ ಕಾರ್ಯಕ್ಕೆ, ಕುಲಗೋಡ ಪೊಲೀಸ್ ಠಾಣೆ ಪಿಎಸ್‍ಐ ಹನಮಂತ ನರಳೆ, ಕರ್ತವ್ಯ ನಿರತ ಪೊಲೀಸ್ ಪೇದೆಗಳ ಸೇವೆಯನ್ನು ಈ ವೇಳೆ ಶ್ಲಾಘಿಸಿದರು.
ನೋಡಲ್ ಅಧಿಕಾರಿ ಜಿ.ಬಿ.ಬಳಿಗಾರ, ಮೂಡಲಗಿ ಬಿಇಒ ಅಜೀತ ಮೆನ್ನಿಕೇರಿ, ಯುವ ಮುಖಂಡ ನಾಗಪ್ಪ ಶೇಖರಗೋಳ, ನಿಂಗಪ್ಪ ಕುರಬೇಟ, ಕುಲಗೋಡ ಪೊಲೀಸ್ ಠಾಣೆ ಪಿಎಸ್‍ಐ ಹನುಮಂತ ನರಳೆ, ತಾಪಂ ಸದಸ್ಯ ಲಕ್ಷ್ಮಣ ನೀಲಣ್ಣವರ, ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ, ಎಂ.ವಿ.ಹಿರೇಮಠ, ಜೆ.ಎಂ.ನದಾಫ್, ಬಸವರಾಜ ಪಣದಿ, ಶ್ರೀಧರ ದೇಯಣ್ಣವರ, ಎಂ.ಐ.ನೀಲಣ್ಣವರ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಕರೋನಾ ಸೈನಿಕರು, ಗ್ರಾಪಂ ಸದಸ್ಯರು, ಪಿಎಚ್‍ಸಿ ಸಿಬ್ಬಂದಿ, ಸ್ಥಳೀಯರು, ಮತ್ತೀತರರು ಇದ್ದರು.

Related posts: