ಗೋಕಾಕ:ಬೆಟಗೇರಿ ಗ್ರಾಮದಲ್ಲಿ ಆಹಾರ ಧಾನ್ಯ ಕಿಟ್ ವಿತರಣೆ
ಬೆಟಗೇರಿ ಗ್ರಾಮದಲ್ಲಿ ಆಹಾರ ಧಾನ್ಯ ಕಿಟ್ ವಿತರಣೆ
ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಮೆ 4 :
ದೇಶಾದ್ಯಂತ ಹರಡುತ್ತಿರುವ ಕರೊನಾ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಲಾಕ್ಡೌನ್ ಜಾರಿಯಲ್ಲಿದ್ದ ಹಿನ್ನಲೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿರುವ ಆಹಾರ ಧಾನ್ಯ ಕಿಟಗಳ ವಿತರಣೆ ಕಾರ್ಯ ಸೋಮವಾರದಂದು ನಡೆಯಿತು
ಬೆಟಗೇರಿ ಗ್ರಾಮದ ಬಾಕಿ ಉಳಿದ 121 ಕುಟುಂಬಗಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಈಶ್ವರ ಬಳಿಗಾರ ಅವರು ಆಹಾರ ಧಾನ್ಯ ಕಿಟ್ ವಿತರಿಸಿ ಮಾತನಾಡುತಾ ಈಗಾಗಲೇ ಗ್ರಾಮದ 1025 ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಣೆ ಮಾಡಲಾಗಿದೆ. ಕೊಡಗೈ ದಾನಿ ಬಾಲಚಂದ್ರ ಅವರನ್ನು ಅರಭಾಂವಿ ಮತಕ್ಷೇತ್ರದ ಶಾಸಕರಾಗಿ ಪಡೆದಿರುವ ನಾವೆಲ್ಲರೂ ಸುದೈವಿಗಳಾಗಿದ್ದೆವೆ. ಮತಕ್ಷೇತ್ರದ ಜನರಿಗೆ ಆಸರೆಯಾಗಿ ಸಹಾಯ, ಸಹಕಾರ ನೀಡುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರ ಸಾಮಾಜಿಕ ಕಳಕಳಿಯನ್ನು ಸ್ಮರಣೀಯವಾದದ್ದು ಎಂದು ಹೇಳಿದರು
ಇದೇ ಸಂಧರ್ಭದಲ್ಲಿ ಗ್ರಾಮದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ, ಕರೊನಾ ಸೈನಿಕರಿಗೆ, ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಆಹಾರ ಧಾನ್ಯ ಕಿಟ್ಗಳನ್ನು ವಿತರಿಸಿಲಾಯಿತು
ಈ ಸಂದರ್ಭದಲ್ಲಿ ತಾಪಂ ಸದಸ್ಯ ಲಕ್ಷ್ಮಣ ನೀಲಣ್ಣವರ, ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ, ಗ್ರಾಮಲೆಕ್ಕಾಧಿಕಾರಿ ಜೆ.ಎಮ್.ನದಾಫ್, ವೈ.ಸಿ.ಶೀಗಿಹಳ್ಳಿ. ಬಸವರಾಜ ಪಣದಿ, ರಮೇಶ ನೀಲಣ್ಣವರ, ಶ್ರೀಧರ ದೇಯಣ್ಣವರ, ಪರಶುರಾಮ ಇಟಗೌಡ್ರ, ಗೌಡಪ್ಪ ಮಾಳೇದ, ಸುರೇಶ ಬಾಣಸಿ, ವಿಠಲ ಚಂದರಗಿ ಸೇರಿದಂತೆ ಇತರರು ಇದ್ದರು.