ಗೋಕಾಕ:ಸಚಿವ ರಮೇಶ ಜಾರಕಿಹೊಳಿ ರಿಂದ ರಾಜ್ಯಸಭಾ ಸದಸ್ಯ ಕಡಾಡಿ ಅವರಿಗೆ ಆತ್ಮೀಯವಾಗಿ ಸತ್ಕಾರ
ಸಚಿವ ರಮೇಶ ಜಾರಕಿಹೊಳಿ ರಿಂದ ರಾಜ್ಯಸಭಾ ಸದಸ್ಯ ಕಡಾಡಿ ಅವರಿಗೆ ಆತ್ಮೀಯವಾಗಿ ಸತ್ಕಾರ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 14 :
ರಾಜ್ಯಸಭೆ ಸದಸ್ಯರಾಗಿ ಪ್ರಥಮ ಬಾರಿಗೆ ಸಚಿವರ ಕಾರ್ಯಾಲಯಕ್ಕೆ ಆಗಮಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಆತ್ಮೀಯವಾಗಿ ಸತ್ಕರಿಸಿದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ, ಪ್ರಧಾನ ಕಾರ್ಯದರ್ಶಿ ಜಯಾನಂದ ಹುಣಶ್ಯಾಳ, ಗ್ರಾಮೀಣ ಘಟಕದ ಅಧ್ಯಕ್ಷ ರಾಜೇಂದ್ರ ಶಿದ್ದಪ್ಪ ಗೌಡಪ್ಪಗೋಳ, ಮುಖಂಡರಾದ ಶಾಮಾನಂದ ಪೂಜೇರಿ, ಬಸವರಾಜ ಹುಳ್ಳೇರ, ಬಸವರಾಜ ಹಿರೇಮಠ, ರಾಜು ಹಿರೇಅಂಬಿಗೇರ, ಶಿವು ಹಿರೇಮಠ, ಪ್ರೇಮಾ ಭಂಡಾರಿ, ಕರುಣಾ ಗರುಡಕರ ಸೇರಿದಂತೆ ಜಿಲ್ಲೆಯ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.