ಗೋಕಾಕ:ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಶಾಂತ ಹಾಗೂ ಸುರಕ್ಷಿತ ವಾತಾವರಣವನ್ನು ಕಲ್ಪಿಸಲಾಗಿದೆ : ಬಿಇಓ ಬಳಗಾರ
ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಶಾಂತ ಹಾಗೂ ಸುರಕ್ಷಿತ ವಾತಾವರಣವನ್ನು ಕಲ್ಪಿಸಲಾಗಿದೆ : ಬಿಇಓ ಬಳಗಾರ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 24 :
ಕೊರೋನಾ ಭೀತಿಯ ಮಧ್ಯೆ ಗುರುವಾರದಿಂದ ಪ್ರಾರಂಭವಾಗಿರುವ ಎಸ್.ಎಸ್.ಎಲ್.ಸಿ ಮೊದಲ ದಿನದಂದು ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಅತ್ಯಂತ ಹುರುಪಿನಿಂದ ಆಗಮಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಿ , ಸೈನಿಟೈಜರ ಸಿಂಪಡಿಸಿ ವಿದ್ಯಾರ್ಥಿಗಳಿಗೆ ಭಯ ಪಡದೆ ಪರೀಕ್ಷೆ ಬರೆಯುವಂತೆ ಸಿಬ್ಬಂದಿಗಳು ಧೈರ್ಯ ತುಂಬುತ್ತಿದ್ದರು.
ವಲಯದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸಿದ್ದೆತೆಗಳನ್ನು ಪರಿಶೀಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಾ ಸರಕಾರ ನೀಡಿದ ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಪಾಲಕರು ಯಾವುದೇ ಆತಂಕಕ್ಕೆ ಒಳಪಡುವ ಅಗತ್ಯವಿಲ್ಲಾ. ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಶಾಂತ ಹಾಗೂ ಸುರಕ್ಷಿತ ವಾತಾವರಣವನ್ನು ಕಲ್ಪಿಸಲಾಗಿದೆ ವಿದ್ಯಾರ್ಥಿಗಳು ಅತ್ಯಂತ ಸಂತೋಷದಿಂದ ಪರೀಕ್ಷೆಯನ್ನು ಎದುರಿಸುತ್ತಿದ್ದಾರೆ ಎಂದು ಬಳಗಾರ ತಿಳಿಸಿದರು
ತಾಲೂಕಿನ ಆರೋಗ್ಯ ಇಲಾಖೆ, ಅಂಗನವಾಡಿ ಕಾರ್ಯಕರ್ತರು , ಆಶಾ ಕಾರ್ಯಕರ್ತರು, ಸ್ಕೌಟ್ಸ್ ಮತ್ತು ಗೈಡ್ಸ ಸೇವಾ ಕಾರ್ಯಕರ್ತರು ಪ್ರತಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ವಿದ್ಯಾರ್ಥಿಗಳನ್ನು ಹುರಿದುಂಬಿಸಿತ್ತಿರುವ ದೃಶ್ಯಗಳು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಂಡು ಬಂದವು.

ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಅಸ್ವಸ್ಥ ಆಗಿದ್ದ ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸುತ್ತಿರುವ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ. ಚಿತ್ರದಲ್ಲಿ ಡಾ.ಜಗದೀಶ ಜಿಂಗಿ ಇದ್ದಾರೆ .
ವಿದ್ಯಾರ್ಥಿನಿ ಅಸ್ವಸ್ಥ : ನರಗದ ಎಲ್.ಇ ಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಜಿಎನ್ಎಸ್ ಶಾಲೆಯ ವಿದ್ಯಾರ್ಥಿನಿ ಯೋರ್ವಳು ಅಸ್ವಸ್ಥವಾಗಿದ್ದ ಘಟನೆ ಜರುಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಬಳಗಾರ ಅವರು ಕೇಂದ್ರಕ್ಕೆ ಭೇಟಿನೀಡಿದ್ದ ಸಂದರ್ಭದಲ್ಲಿ ಈ ಘಟನೆ ಜರುಗಿದ್ದು, ಶಿಕ್ಷಣಾಧಿಕಾರಿ ಬಳಗಾರ ಅವರು ವೈದ್ಯಾಧಿಕಾರಿ ಅವರ ಗಮನಕ್ಕೆ ತಂದಾಗ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ಅವರು ವಿದ್ಯಾರ್ಥಿನಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡುತ್ತಿದ್ದಾರೆ. ವಿದ್ಯಾರ್ಥಿನಿ ಆರೋಗ್ಯವಾಗಿದ್ದಾಳೆಂದು ಬಿಇಓ ಬಳಗಾರ ಅವರು ಪತ್ರಿಕೆಗೆ ತಿಳಿಸಿದ್ದಾರೆ.
113 ವಿದ್ಯಾರ್ಥಿಗಳು ಗೈರು : ಕೊರೋನಾ ಭೀತಿಯ ಮಧ್ಯೆ ಜರುಗಿದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಬರಬೇಕಾಗಿದ್ದ, ಒಟ್ಟು 4343 ವಿದ್ಯಾರ್ಥಿಗಳ ಪೈಕಿ 4230 ವಿದ್ಯಾರ್ಥಿಗಳು ಹಾಜರಾಗಿದ್ದರೆ 113 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.