ಗೋಕಾಕ:ಕೊರೋನಾ ಹರಡದಂತೆ ತಡೆಗಟ್ಟಲು ಎಲ್ಲರೂ ಮುಂಜಾಗ್ರತಾ ಕ್ರಮ ಅನುಸರಿಸಿ : ಡಾ. ರಾಜೇಶ್ವರಿ ಹಿರೇಮಠ
ಕೊರೋನಾ ಹರಡದಂತೆ ತಡೆಗಟ್ಟಲು ಎಲ್ಲರೂ ಮುಂಜಾಗ್ರತಾ ಕ್ರಮ ಅನುಸರಿಸಿ : ಡಾ. ರಾಜೇಶ್ವರಿ ಹಿರೇಮಠ
ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ಜು 17 :
ಗೋಕಾಕ ತಾಲೂಕಿನಲ್ಲಿ ಹಲವು ಹಳ್ಳಿಗಳಲ್ಲಿ ದಿನದಿಂದ ದಿನಕ್ಕೆ ಕರೊನಾ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ದೃಢಪಡುತ್ತಿರುವ ಹಿನ್ನಲೆಯಲ್ಲಿ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಎಲ್ಲ ಹಳ್ಳಿಗಳ ಸಮಸ್ತ ಜನತೆ ಕರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ಹೇಳಿದ್ದಾರೆ.
ಶುಕ್ರವಾರದಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಯಸ್ಸಾದವರಿಗೆ ಕರೊನಾ ಸೋಂಕು ತಗುಲಿದರೆ ಅಪಾಯವಿರುತ್ತದೆ, ಆದ್ದರಿಂದ 10 ವರ್ಷದ ಒಳಗಿನ ಮಕ್ಕಳು, 60 ವರ್ಷ ಮೇಲ್ಪಟ್ಟ ವಯಸ್ಕರರು ಮನೆಯಿಂದ ಯಾರೂ ಹೊರಗೆ ಹೋಗದಂತೆ ಅನಗತ್ಯವಾಗಿ ಮನೆಯಿಂದ ಹೊರಬೇಡಿ, ದಿನಬಳಕೆ ವಸ್ತುಗಳನ್ನು ತರಲು ಮನೆಯಿಂದ ಹೊರಬಂದರೆ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಹಾಮಾರಿ ಕುರಿತು ಜನತೆಯಲ್ಲಿ ಎಚ್ಚರಿಕೆವಿರಲಿ, ಭಯಬೇಡ, ಎಲ್ಲರೂ ಸುರಕ್ಷಿತವಾಗಿ ಮನೆಯಲ್ಲಿ ಇರಬೇಕು ಎಂದರು.
ಎಲ್ಲರೂ ಸ್ವಯಂ ಪ್ರೇರತರಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವದರ ಜೊತೆಗೆ ಪ್ರತಿಯೊಬ್ಬರೂ ತಪ್ಪದೇ ಮಾಸ್ಕ್ ಧರಿಸಿ, ಸ್ಯಾನೇಟೈಜರ್ ಬಳಕೆ ಮಾಡಬೇಕು. ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ಗೋಕಾಕ ತಾಲೂಕಾಡಳಿತ, ಆರೋಗ್ಯ ಇಲಾಖೆಯ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಿ, ಕರೊನಾ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಎಲ್ಲ ಹಳ್ಳಿಗಳ ಸಾರ್ವಜನಿಕರು ಸಹಕರಿಸಬೇಕು ಎಂದು ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ಅವರು ಮನವಿ ಮಾಡಿಕೊಂಡಿದ್ದಾರೆ.