ಗೋಕಾಕ:ಶಾಲೆಯ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿ ಭೂಮಿ ಪೂಜೆ
ಶಾಲೆಯ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿ ಭೂಮಿ ಪೂಜೆ
ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ಅ 31 :
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಅರಭಾವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಪರ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ಗ್ರಾಮಕ್ಕೆ ಬೇಕಾದÀ ಶೈಕ್ಷಣಿಕ ಕ್ಷೇತ್ರದ ಇನ್ನೂ ಕೆಲವು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದÀರು.
ಶಾಲೆಯ ಮುಖ್ಯ ಶಿಕ್ಷಕ ವೈ.ಸಿ.ಶೀಗಿಹಳ್ಳಿ ಅವರು ಮಾತನಾಡಿ, ನಬಾರ್ಡ್ ಯೋಜನೆಯ ಆರ್ಐಡಿಎಫ್ ಅನುದಾನದಡಿಯ ಸುಮಾರು 22ಲಕ್ಷ ರೂ.ಗಳ ವೆಚ್ಚದಲ್ಲಿ 2 ನೂತನ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು. ಸಂಗಯ್ಯ ಹಿರೇಮಠ ಕಾರ್ಯಕ್ರಮದ ಸಾನಿಧ್ಯ, ನಿಂಗಯ್ಯ ಮಠದ ಸಮ್ಮುಖ, ಎಸ್ಡಿಎಮ್ಸಿ ಅಧ್ಯಕ್ಷ ರಾಮಣ್ಣ ನೀಲಣ್ಣವರ ಅಧ್ಯಕ್ಷತೆ ವಹಿಸಿದ್ದರು.
ಗೋಕಾಕ ಎನ್ಎಸ್ಎಫ್ ಪ್ರತಿನಿಧಿ ಸಿ.ಪಿ.ಯಕ್ಸಂಬಿ, ತಾಪಂ ಸದಸ್ಯ ಲಕ್ಷ್ಮಣ ನೀಲಣ್ಣವರ, ಬಿ.ಟಿ.ಪುಂಜಿ, ಪರಮಾನಂದ ಕೋಣಿ, ಅರ್ಜುನ ಅಂದಾನಿ, ಮಲ್ಲಪ್ಪ ಪಣದಿ, ದುಂಡಪ್ಪ ಕಂಬಿ, ಗುತ್ತಿಗೆದಾರ ಬಸವರಾಜ ಕೋಣಿ, ವಿಜಯ ಮಠದ, ಮಾರುತಿ ನೀಲಣ್ಣವರ, ಪ್ರಕಾಶ ಹಾಲಣ್ಣವರ, ಆರ್.ಬಿ.ಬೆಟಗೇರಿ, ಉದ್ದಪ್ಪ ಚಂದರಗಿ, ಅರ್ಜುನ ಬ್ಯಾಗಿ, ಎಸ್ಡಿಎಂಸಿ ಸದಸ್ಯರು, ಸ್ಥಳೀಯರು ಇದ್ದರು.