ಗೋಕಾಕ:ಶಾಸಕ ಬಾಲಚಂದ್ರ ಅವರ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ : ಡಾ.ರಾಜೇಂದ್ರ ಸಣ್ಣಕ್ಕಿ
ಶಾಸಕ ಬಾಲಚಂದ್ರ ಅವರ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ : ಡಾ.ರಾಜೇಂದ್ರ ಸಣ್ಣಕ್ಕಿ
ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಸೆ 10 :
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಅರಭಾಂವಿ ಮತಕ್ಷೇತ್ರದ ಶಾಸಕರಾಗಿ ಪಡೆದಿರುವ ನಾವೆಲ್ಲರೂ ಸುದೈವಿಗಳಾಗಿದ್ದೆವೆ. ಅರಭಾಂವಿ ಮತಕ್ಷೇತ್ರದ ಜನರಿಗೆ ಆಸರೆಯಾಗಿ ಸಹಾಯ, ಸಹಕಾರ ನೀಡುತ್ತಿರುವ ಶಾಸಕ ಬಾಲಚಂದ್ರ ಅವರ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು.
ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಮೆಳವಂಕಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಬೆಟಗೇರಿ ಗ್ರಾಮದಲ್ಲಿ ಸೋಮವಾರದಂದು ನಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು 2 ಹಂತದಲ್ಲಿ ಉಚಿತವಾಗಿ ನೀಡುತ್ತಿರುವ ಸ್ಥಳೀಯ ಪ್ರತಿ ಕುಟುಂಬಕ್ಕೆ 2ಜೋತೆ ಮಾಸ್ಕ್, ಪಿಎಚ್ಸಿ, ಗ್ರಾಪಂ ಸಿಬ್ಬಂದಿ, ಕಂದಾಯ ಇಲಾಖೆ ಹಾಗೂ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಕರೊನಾ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಉಪಯೋಗಿಸುವ ಸುರಕ್ಷತಾ ವಿಶೇಷ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.
ಮಹಾಮಾರಿ ಕರೊನಾ ವೈರಸ್ ಹರಡುವಿಕೆ ಇನ್ನೂ ಸಂಪೂರ್ಣ ನಿಯಂತ್ರಣದಲ್ಲಿ ಇಲ್ಲಾ, ಕರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮಾಸ್ಕ್ ಧರಿಸಬೇಕು. ದೈಹಿಕ ಅಂತರ ಕಾಪಾಡಿಕೊಳ್ಳುವುದರ ಜೋತೆಗೆ ಕರೊನಾ ವೈರಸ್ ನಿಯಂತ್ರಣಾ ಕ್ರಮಗಳನ್ನು ತಪ್ಪದೇ ಅನುಸರಿಸಬೇಕು ಎಂದು ಡಾ.ರಾಜೇಂದ್ರ ಸಣ್ಣಕ್ಕಿ ಸಲಹೆ ನೀಡಿದರು.
ಸ್ಥಳೀಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವೆಚಾರಕ ಬಸವರಾಜ ಪಣದಿ ಪ್ರಾಸ್ತಾವಿಕವಾಗಿ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಾಮಾಜಿಕ ಕಳಕಳಿಯನ್ನು ಹಾಗೂ ಗ್ರಾಮದಲ್ಲಿ ಕರೊನಾ ತಡೆಗಟ್ಟುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯವರ ಕಾರ್ಯವನ್ನು ಶ್ಲಾಘಿಸಿದರು.
ನೋಡಲ್ ಅಧಿಕಾರಿ ಜಿ.ಬಿ.ಬಳಿಗಾರ, ಗೋಕಾಕ ಎನ್ಎಸ್ಎಫ್ ತಂಡದ ಪ್ರತಿನಿಧಿ ಅಬ್ದುಲ್ ಮಿರ್ಜಾನಾಯ್ಕ, ತಾಪಂ ಸದಸ್ಯ ಲಕ್ಷ್ಮಣ ನೀಲಣ್ಣವರ, ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ, ಗ್ರಾಮಲೆಕ್ಕಾಧಿಕಾರಿ ಜೆ.ಎಂ.ನದಾಫ್, ಗ್ರಾಪಂ ಆಡಳಿತಾಧಿಕಾರಿ ವಿ.ಸಿ.ಪತ್ತಾರ, ಕೌಜಲಗಿ ಉಪತಹಶೀಲ್ದಾರ ಎಸ್.ಬಿ.ಕಟ್ಟಿಮನಿ, ಸುಭಾಷ ಜಂಬಗಿ, ಹನುಮಂತ ಸವತಿಕಾಯಿ, ಬಸವರಾಜ ಪಣದಿ, ಪರಶುರಾಮ ಇಟಗೌಡ್ರ, ಗೌಡಪ್ಪ ಮಾಳೇದ, ಸುರೇಶ ಬಾಣಸಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಗ್ರಾಪಂ ಮಾಜಿ ಸದಸ್ಯರು, ಸಿಬ್ಬಂದಿ, ಪಿಎಚ್ಸಿ ಸಿಬ್ಬಂದಿ, ಸ್ಥಳೀಯರು ಇದ್ದರು.