ಗೋಕಾಕ :ಕಾಲೇಜು ಪ್ರಾರಂಭ : ವಿದ್ಯಾರ್ಥಿಗಳಿಂದ ನಿರಸ ಪ್ರತಿಕ್ರಿಯೆ , ಮೊದಲ ದಿನ ಕಾಲೇಜಿನತ್ತ ಸುಳಿಯದ ವಿದ್ಯಾರ್ಥಿಗಳು
ಕಾಲೇಜು ಪ್ರಾರಂಭ : ವಿದ್ಯಾರ್ಥಿಗಳಿಂದ ನಿರಸ ಪ್ರತಿಕ್ರಿಯೆ , ಮೊದಲ ದಿನ ಕಾಲೇಜಿನತ್ತ ಸುಳಿಯದ ವಿದ್ಯಾರ್ಥಿಗಳು
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 17 :
ಕೊವಿಡ್ ಕಾರಣದಿಂದ ಕಳೆದ ಎಂಟು ತಿಂಗಳಿಂದ ಮುಚ್ಚಿದ್ದ ಪದವಿ ಕಾಲೇಜುಗಳು ರಾಜ್ಯಾದ್ಯಂತ ಪುನರಾರಂಭಗೊಂಡಿದ್ದು, ಗೋಕಾಕ ನಗರದಲ್ಲಿ ವಿದ್ಯಾರ್ಥಿಗಳಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಾಜ್ಯಾದ್ಯಂತ ಮಂಗಳವಾರದಿಂದ ಪದವಿ ಕಾಲೇಜುಗಳು ಪ್ರಾರಂಭಗೊಂಡಿದ್ಧು, ನಗರದ ಸರಕಾರಿ ಪದವಿ ಕಾಲೇಜು , ಜೆ.ಎಸ್ಎಸ್. ಮತ್ತು ಎಲ್ ಇ ಟಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಲ್ಲದೆ ಬಿಕ್ಕೋ ಎನ್ನುತ್ತಿವೆ .
ಕೊರೋನಾ ಕಾರಣದಿಂದ ಕಾಲೇಜುಗಳಲ್ಲಿ ಸುರಕ್ಷತಾ ಕ್ರಮ ಕೈಗೊಂಡು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಾಗಿದ್ದು, ವಿದ್ಯಾರ್ಥಿಗಳಿಗಾಗಿ ಕಾಯುತ್ತಾ ಕುಳಿತಿದ್ದಾರೆ.
ಸರಕಾರ ವಿದ್ಯಾರ್ಥಿಗಳು ಕೋವಿಡ್ ಪ್ರಮಾಣಪತ್ರ ತರುವುದು ಕಡ್ಡಾಯಗೊಳಿಸಿದ್ದರಿಂದ ಪರೀಕ್ಷೆ ಎಲ್ಲಿ ಮಾಡಿಸಬೇಕು ಎನ್ನುವ ಗೊಂದಲ ಅವರಲ್ಲಿ ಉಂಟಾಗಿದೆ. ಸಾಲು ಸಾಲು ಹಬ್ಬದ ಕಾರಣ ರಜೆಗಳು ಬಂದಿದ್ದರಿಂದ ಕೋವಿಡ್ ಪರೀಕ್ಷಾ ಪ್ರಮಾಣಪತ್ರ ಪಡೆಯುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ ಇನ್ನೂ ಸಿಕ್ಕಿಲ್ಲ.
ಇವೂ ಸೇರಿದಂತೆ ಹಲವು ಕಾರಣಗಳಿಂದಾಗಿ ವಿದ್ಯಾರ್ಥಿಗಳು ಕಾಲೇಜುಗಳ ಕಡೆ ಸುಳಿದಿಲ್ಲ. ಬಹುತೇಕರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ. ಪರಿಣಾಮ, ಕಾಲೇಜುಗಳ ಕ್ಯಾಂಪಸ್ ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವಿರಳವಾಗಿತ್ತು.
ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದರಾದರೂ ಅವರ ಬಳಿ ಕೋವಿಡ್ ಪರೀಕ್ಷಾ ವರದಿ ಇರಲಿಲ್ಲ. ಆದ್ದರಿಂದ ಅವರನ್ನು ಮಾರ್ಗಸೂಚಿಗಳ ಪ್ರಕಾರ ಕಾಲೇಜ ಮುಖ್ಯಸ್ಥರು ವಾಪಸ್ ಕಳುಹಿಸಿದ್ದಾರೆ.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿರುವ ಸರಕಾರಿ ಪದವಿ ಕಾಲೇಜಿನ ಪ್ರಭಾರಿ ಪ್ರಾಚಾರ್ಯ ಮಹೇಶ ಕಂಬಾರ ಕಳೆದ ಎಂಟು ತಿಂಗಳಿನಿಂದ ಬಂದ್ ಇದ್ದ ಕಾಲೇಜುಗಳನ್ನು ಆರಂಭಿಸುವಂತೆ ಸರಕಾರ ಕೆಲವೊಂದು ಮಾರ್ಗಸೂಚಿ ಪ್ರಕಾರ ಆದೇಶ ಹೋರಡಿಸಿದ್ದು, ವಿದ್ಯಾರ್ಥಿಗಳಿಗೆ ಸರಕಾರದ ಮಾರ್ಗಸೂಚಿಯನ್ನು ತಲುಪಿಸಲಾಗಿದ್ದು, ಕೊವಿಡ್ ಮುಂಜಾಗ್ರತಾ ಕ್ರಮದಂತೆ ಕಾಲೇಜು ಪ್ರಾರಂಭಿಸಲು ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಕೊವಿಡ್ ಪರೀಕ್ಷೆ ಮಾಡಿಕೊಂಡ ಬರುವ ವಿದ್ಯಾರ್ಥಿಗಳಿಗೆ ಸಮಾಜಿಕ ಅಂತರ ದೊಂದಿಗೆ ಕಾಲೇಜಿನಲ್ಲಿ ಪಾಠ ಕೇಳಲು ಅನುವು ಮಾಡಿಕೊಡಲಾಗುವುದು. ವಿದ್ಯಾರ್ಥಿಗಳು ತಮ್ಮ ಸಮೀಪದ ಸರಕಾರಿ ಆಸ್ಪತ್ರೆಗಳಲ್ಲಿ ಕೊವಿಡ್ ಪರೀಕ್ಷೆ ಮಾಡಿಕೊಂಡು ಬರಬೇಕು. ಒಟ್ಟು ಹಾಜರಾತಿಯ ಅರ್ಥದಷ್ಟು ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ತರಗತಿ ತಗೆದುಕೊಂಡು ಉಳಿದ ಅರ್ಥ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ತಗೆದುಕೊಳ್ಳಲಾಗುವುದು. ಮರುದಿನ ಆನ್ ಲೈನ್ ತರಗತಿಯಲ್ಲಿ ಪಾಲ್ಗೊಂಡವರಿಗೆ ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ ಆನ್ ಲೈನ ತರಗತಿ ತಗೆದುಕೊಳ್ಳಲು ಎಲ್ಲ ಕ್ರಮ ಕೈಗೊಳ್ಳಲಾಗಿದ್ದು, ಕಾಲೇಜನ್ನು ಸಂಪೂರ್ಣ ಸ್ವಚ್ಛಗೊಳಿಸಿ ಸೈನಿಟೈಜರ್ ಸಿಂಪಡಿಸಲಾಗಿದ್ದು. ಇನ್ನೇರೆಡು ದಿನಗಳಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.