RNI NO. KARKAN/2006/27779|Tuesday, June 3, 2025
You are here: Home » breaking news » ಗೋಕಾಕ:ಧರ್ಮೇಗೌಡರ ನಿಧನಕ್ಕೆ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

ಗೋಕಾಕ:ಧರ್ಮೇಗೌಡರ ನಿಧನಕ್ಕೆ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ 

ಧರ್ಮೇಗೌಡರ ನಿಧನಕ್ಕೆ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 29 :

 
ವಿಧಾನ ಪರಿಷತ್ತಿನ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ಅವರ ನಿಧನಕ್ಕೆ ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದ ಧರ್ಮೇಗೌಡರು ವಿಧಾನ ಪರಿಷತ್ತಿನ ಉಪಸಭಾಪತಿಗಳಾಗಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ನಿಧನದಿಂದ ಒಬ್ಬ ಆತ್ಮೀಯ ಗೆಳೆಯನೊಬ್ಬನನ್ನು ಕಳೆದುಕೊಂಡಂತಾಗಿದೆ. ಧರ್ಮೇಗೌಡರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿ ನೀಡಲಿ. ಅವರ ಕುಟುಂಬದವರಿಗೆ ಅಗಲಿಕೆಯ ದು:ಖವನ್ನು ಸಹಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪರಮಾತ್ಮನಲ್ಲಿ ಪ್ರಾರ್ಥಿಸುವದಾಗಿ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Related posts: