RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಫೆ 27 ರಂದು ಗೋಕಾಕ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನ : ಮಹಾಂತೇಶ ತಾಂವಶಿ ಮಾಹಿತಿ

ಗೋಕಾಕ:ಫೆ 27 ರಂದು ಗೋಕಾಕ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನ : ಮಹಾಂತೇಶ ತಾಂವಶಿ ಮಾಹಿತಿ 

ಫೆ 27 ರಂದು ಗೋಕಾಕ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನ : ಮಹಾಂತೇಶ ತಾಂವಶಿ ಮಾಹಿತಿ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 22 :

 
ದಿ. 27 ರಂದು ನಗರದ ಎನ್‍ಇಎಸ್ ಶಾಲಾ ಆವರಣದಲ್ಲಿ ಗೋಕಾಕ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದ್ದು ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ: ಸಿ.ಕೆ.ನಾವಲಗಿ ಅವರ ನೇತ್ರತ್ವದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಕಸಾಪ ತಾಲೂಧ್ಯಕ್ಷ ಮಹಾಂತೇಶ ತಾಂವಶಿ ತಿಳಿಸಿದರು.
ಸೋಮವಾರದಂದು ಸಂಜೆ ಇಲ್ಲಿಯ ರೋಟರಿ ರಕ್ತ ಭಂಡಾರದ ಸಭಾ ಭವನದಲ್ಲಿ ದಿ. 27ರಂದು ಜರುಗಲಿರುವ ಗೋಕಾಕ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಮುಂಜಾನೆ 8 ಗಂಟೆಗೆ ಧ್ವಜಾರೋಹಣ, 8.30ಗಂಟೆಗೆ ಬಸವೇಶ್ವರ ವೃತ್ತದಿಂದ ಎನ್‍ಇಎಸ್ ಶಾಲಾ ಆವರಣದಲ್ಲಿ (ರಂಗಕರ್ಮಿ ಬಸವಣ್ಣೆಪ್ಪ ಹೊಸಮನಿ) ಸಭಾ ಮಂಟಪದ ವರೆಗೆ ನಾಡದೇವಿ ಭುವನೇಶ್ವರಿ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯುವುದು. ಮೆರವಣಿಗೆ ಕಾರ್ಯಕ್ರಮಕ್ಕೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
10 ಗಂಟೆಗೆ ಜರುಗುವ ಸಮ್ಮೇಳನವನ್ನು ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಉಧ್ಘಾಟಿಸಲಿದ್ದು, ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದನಾಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ವಹಿಸವರು, ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ವಹಿಸಲಿದ್ದಾರೆ. ಸರ್ವಾಧ್ಯಕ್ಷ ಡಾ: ಸಿ.ಕೆ.ನಾವಲಗಿ, ನಿಕಟಪೂರ್ವ ಸರ್ವಾಧ್ಯಕ್ಷ ಮಹಾಲಿಂಗ ಮಂಗಿ, ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಸೇರಿದಂತೆ ಜನಪ್ರತಿನಿಧಿಗಳ ಹಾಗೂ ಗಣ್ಯರು ಉಪಸ್ಥಿತರಿರುವರು ಎಂದು ಹೇಳಿದರು.
ಮಧ್ಯಾಹ್ನ 12.30 ಗಂಟೆಗೆ ಬಸವಣ್ಣ, ಗಾಂಧಿ ಹಾಗೂ ಅಂಬೇಡ್ಕರ ಅವರ ಚಿಂತನೆಗಳ ಚಿಂತನಗೋಷ್ಠಿ, 2.30 ಗಂಟೆಗೆ ಸಾಧಕರ ಸನ್ಮಾನ ಸಮಾರಂಭ, 3.30 ಗಂಟೆಗೆ ಕವಿಗೋಷ್ಠಿ ನಡೆಯಲಿವೆ. 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದ ಸಾನಿಧ್ಯವನ್ನು ಕೌಲಗುಡ್ಡದ ಶ್ರೀ ಸಿದ್ದಯೋಗಿ ಅಮರೇಶ್ವರ ಮಹಾರಾಜರು ವಹಿಸಲಿದ್ದು, ಅಧ್ಯಕ್ಷತೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ವಹಿಸಲಿದ್ದು ಮುಖ್ಯ ಅತಿಥಿಗಳಾ ಚಲನಚಿತ್ರ ನಟಿ ಶ್ರೀಮತಿ ಭಾವನಾ ಆಗಮಿಸಲಿದ್ದು, ಕನ್ನಡಾಭಿಮಾನಿಗಳು, ಸಾಹಿತಿಗಳು, ಸಾಹಿತಾಸಕ್ತರು, ಜನಪ್ರತಿನಿಧಿಗಳು, ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ವಿವಿಧ ಸಂಘ-ಸಂಸ್ಥೆಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ಸಾಹಿತಿಗಳಾದ ಪ್ರೊ. ಚಂದ್ರಶೇಖರ ಅಕ್ಕಿ, ಸಿದ್ಧಲಿಂಗ ದಳವಾಯಿ, ಪ್ರಾ. ಗಂಗಾಧರ ಮಳಗಿ, ಬಸವರಾಜ ಮುರಗೋಡ, ಜಯಾನಂದ ಮಾದರ, ಬಸವರಾಜ ಖಾನಪ್ಪನವರ, ಭಾರತಿ ಮದಭಾಂವಿ, ಶೈಲಾ ಕೊಕ್ಕರಿ, ಶಿವಲೀಲಾ ಪಾಟೀಲ, ಸುರೇಶ ಹನಗಂಡಿ, ರಾಮಚಂದ್ರ ಕಾಕಡೆ, ಲಕ್ಷ್ಮಣ ಸೊಂಟಕ್ಕಿ ಇದ್ದರು.

Related posts: