ಗೋಕಾಕ:ಉಪ ಚುನಾವಣೆಗೆ ಎಲ್ಲ ಕಾರ್ಯಕರ್ತರು ಒಗ್ಗಟಿನಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮವಹಿಸಿ : ಶಫೀ ಜಮಾದಾರ
ಉಪ ಚುನಾವಣೆಗೆ ಎಲ್ಲ ಕಾರ್ಯಕರ್ತರು ಒಗ್ಗಟಿನಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮವಹಿಸಿ : ಶಫೀ ಜಮಾದಾರ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 25 :
ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಎಲ್ಲ ಕಾರ್ಯಕರ್ತರು ಒಗ್ಗಟಿನಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮವಹಿಸಿ ಕಾರ್ಯಪ್ರವೃತ್ತರಾಗಿರಿ ಎಂದು ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಶಫೀ ಜಮಾದಾರ ಹೇಳಿದರು
ಗುರುವಾರದಂದು ನಗರದ ಸಚಿವರ ಕಾರ್ಯಾಲಯದಲ್ಲಿ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳು ಸಭೆಯಲ್ಲಿ ಪದಾಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಚುನಾವಣೆ ದಿನಾಂಕ ಅತೀ ಶೀಘ್ರದಲ್ಲೇ ಘೋಷಣೆಯಾಗಲಿದ್ದು , ಪಕ್ಷವು ಸೂಚಿಸುವ ಅಭ್ಯರ್ಥಿಯ ಗೆಲುವಿಗೆ ಎಲ್ಲ ಅಲ್ಪಸಂಖ್ಯಾತ ಮೋರ್ಚಾದ ಎಲ್ಲ ಕಾರ್ಯಕರ್ತರು ಭೂತ ಮಟ್ಟದಲ್ಲಿ ಸಕ್ರೀಯವಾಗಿ ಕಾರ್ಯ ಪಕ್ಷದ ಸಾಧನಗಳನ್ನು ಮನೆ ಮನೆಗೆ ತಲುಪಿಸಿ ಪಕ್ಷದ ಗೆಲುವಿಗೆ ಶ್ರಮಿಸಬೇಕು.
ಇದರ ಪೂರ್ವಭಾವಿಯಾಗಿ ನಾಳೆ ದಿನಾಂಕ 26 ಶುಕ್ರವಾರದಂದು ನಗರದ ಸಚಿವರ ಕಾರ್ಯಾಲಯದಲ್ಲಿ ಮಧ್ಯಾಹ್ನ 3 ಘಂಟೆ ಅಲ್ಪಸಂಖ್ಯಾತ ಮೋರ್ಚಾದ ನಗರ, ಗ್ರಾಮೀಣ ಹಾಗೂ ಮೂಡಲಗಿ ಘಟಕಗಳ ಪದಾಧಿಕಾರಿಗಳು ಸಭೆ ನಡೆಯಲ್ಲಿದ್ದು , ಈ ಸಭೆಯಲ್ಲಿ ಮೋರ್ಚಾದ ಎಲ್ಲ ಪದಾಧಿಕಾರಿಗಳು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಕೋರಿದರು .
ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ದಾವುಲ ಶಿಪ್ಪಿ,
ಅಲ್ಪಸಂಖ್ಯಾತ ಮೋರ್ಚಾ ನಗರ ಘಟಕದ ಅಧ್ಯಕ್ಷ ಮಲ್ಲಿಕಜಾನ ತಲವಾರ, ಪ್ರಧಾನ ಕಾರ್ಯದರ್ಶಿ ಅಬ್ಬಾಸ ದೇಸಾಯಿ, ಲಾಲಸಾಬ ಜಗದಾಳ, ರಾಜೇಂದ್ರ ಗೌಡಪ್ಪಗೋಳ ಸೇರಿದಂತೆ ಇತರರು ಇದ್ದರು.