RNI NO. KARKAN/2006/27779|Sunday, June 15, 2025
You are here: Home » breaking news » ಗೋಕಾಕ:ಟೆಂಡರ್ ಪಡೆದ ಗುತ್ತಿಗೆದಾರರು ಉಪ ಗುತ್ತಿಗೆ ನೀಡಿದ್ದು ಕಂಡು ಬಂದರೆ ಅಂತಹ ಗುತ್ತಿಗೆದಾರರು ಬ್ಲಾಕ್ ಲಿಸ್ಟ್ ಗೆ ಸೇರಿಸಲು ಕ್ರಮ : ಡಿಸಿಎಂ ಕಾರಜೋಳ ಎಚ್ಚರಿಕೆ

ಗೋಕಾಕ:ಟೆಂಡರ್ ಪಡೆದ ಗುತ್ತಿಗೆದಾರರು ಉಪ ಗುತ್ತಿಗೆ ನೀಡಿದ್ದು ಕಂಡು ಬಂದರೆ ಅಂತಹ ಗುತ್ತಿಗೆದಾರರು ಬ್ಲಾಕ್ ಲಿಸ್ಟ್ ಗೆ ಸೇರಿಸಲು ಕ್ರಮ : ಡಿಸಿಎಂ ಕಾರಜೋಳ ಎಚ್ಚರಿಕೆ 

ಟೆಂಡರ್ ಪಡೆದ ಗುತ್ತಿಗೆದಾರರು ಉಪ ಗುತ್ತಿಗೆ ನೀಡಿದ್ದು ಕಂಡು ಬಂದರೆ ಅಂತಹ ಗುತ್ತಿಗೆದಾರರು ಬ್ಲಾಕ್ ಲಿಸ್ಟ್ ಗೆ ಸೇರಿಸಲು ಕ್ರಮ : ಡಿಸಿಎಂ ಕಾರಜೋಳ ಎಚ್ಚರಿಕೆ

 

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 28 :

 
ಟೆಂಡರ್ ಪಡೆದ ಗುತ್ತಿಗೆದಾರರು ಉಪ ಗುತ್ತಿಗೆ ನೀಡಿ ಕೆಲಸ ಮಾಡಿಸಿದ್ದು ಕಂಡು ಬಂದಲ್ಲಿ ಅಂತಹ ಗುತ್ತಿಗೆದಾರರು ಬ್ಲಾಕ್ ಲಿಸ್ಟ್ ಗೆ ಸೇರಿಸಲು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು

ರವಿವಾರದಂದು ತಾಲೂಕಿನ ಗೋಕಾಕ ಫಾಲ್ಸ ಜಲಪಾತ ಹತ್ತಿರ ಘಟಪ್ರಭಾ ನದಿಗೆ ಹೊಸದಾಗಿ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದ ನಂತರ ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು

ಫಾಲ್ಸ ಮತ್ತು ಧೂಪದಾಳ ಮಧ್ಯ ಸೇತುವೆ ನಿರ್ಮಿಸಲು 15.54 ಕೋಟಿ ರೂಪಾಯಿ ವೆಚ್ಚದಲ್ಲಿ 2017 ಜನೇವರಿ 31 ರಂದು ಆಡಳಾತ್ಮಕ ಮಂಜೂರಾತಿ ದೊರೆತ್ತಿದ್ದು, ಈ ಸೇತುವೆ ಒಟ್ಟು ಉದ್ದ 352 ಮೀಟರ್ ಉದ್ದವಿದ್ದು, 13 ಅಂಕಣಗಳನ್ನು ಹೊಂದಿದೆ. ಸೇತುವೆಯಲ್ಲಿ ವಾಹನಗಳು ದಾಟಲು ಒಟ್ಟು 12 ಮೀಟರ್ ಅಗಲ ಜಾಗವಿದ್ದು, ಎಡ ಮತ್ತು ಬಲ ಬದಿಗೆ ಪಾದಾಚಾರಿಗಳು ಸಂಚರಿಸಲು 1.5 ಮೀಟರ್ ನ ಪೂಟಪಾಥ ಮಾಡಲಾಗುವುದು.
ಈ ಕಾಮಗಾರಿಯನ್ನು ಪೂರ್ಣಗೋಳಿಸಲು 14 ತಿಂಗಳ ಅವಧಿಯನ್ನು ನೀಡಲಾಗಿತ್ತು ಆದರೆ ಕೊರೋನಾ ಮಹಾಮಾರಿಯಿಂದ ಕಾಮಗಾರಿ ಪೂರ್ಣಗೊಳ್ಳಲು ವಿಳಂಭವಾಗಿದ್ದು , ಬರುವ ಜುಲೈ 31 ರ ಒಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚಿಸಲಾಗಿದೆ.
ಗುತ್ತಿಗೆದಾರರು ಕಾರ್ಮಿಕರ ಕೊರತೆಯನ್ನು ಮುಂದಿಟ್ಟುಕೊಂಡು ಹೆಚ್ಚಿನ ಸಮಯವನ್ನು ಬೇಡಿದ್ದಾರೆ.
ಸ್ಥಳೀಯ ಸಂಪನ್ಮೂಲಗಳನ್ನು ಮತ್ತು ಕಾರ್ಮಿಕರನ್ನು ಬಳಸಿಕೊಂಡು ಆದಷ್ಟೂ ಬೇಗ ಕಾಮಗಾರಿಯನ್ನು ಜುಲೈ ಒಳಗೆ ಪೂರ್ಣಗೋಳಿಸಿ ಸಂಚಾರಕ್ಕೆ ಮುಕ್ತಗೋಳಿಸುವಂತೆ ನಾನು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಕಾರಜೋಳ ಹೇಳಿದರು

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ , ಲೋಕೋಪಯೋಗಿ ಇಲಾಖೆಯ ಹಿರಿಯ ಮತ್ತು ಕಿರಿಯ ಅಧಿಕಾರಿಗಳು , ಗುತ್ತಿಗೆದಾರರು ಉಪಸ್ಥಿತರಿದ್ದರು.

Related posts: