RNI NO. KARKAN/2006/27779|Sunday, June 15, 2025
You are here: Home » breaking news » ಗೋಕಾಕ:ಕೇಂದ್ರ ಸರಕಾರ ಕೈಗೊಂಡಿರುವ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಾಸಕರಿಗೆ ಮನವಿ

ಗೋಕಾಕ:ಕೇಂದ್ರ ಸರಕಾರ ಕೈಗೊಂಡಿರುವ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಾಸಕರಿಗೆ ಮನವಿ 

ಕೇಂದ್ರ ಸರಕಾರ ಕೈಗೊಂಡಿರುವ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಾಸಕರಿಗೆ ಮನವಿ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 5 :

 
ಕೇಂದ್ರ ಸರಕಾರ ಕೈಗೊಂಡಿರುವ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಇಲ್ಲಿನ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಕಾರ್ಯಕರ್ತರು ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.

ಶನಿವಾರದಂದು ನಗರ ಶಾಸಕರ ಕಛೇರಿಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾದ ಸಂಘಟನೆಯ ಕಾರ್ಯಕರ್ತರು ಮನವಿ ಅರ್ಪಿಸಿದರು.

ಕೇಂದ್ರ ಸರಕಾರ ರೈತ ವಿರೋಧಿ ಕಾನೂನುಗಳನ್ನು ಅನುಸರಿಸಿ ಇಂದಿಗೆ ಒಂದು ವರ್ಷವಾಯಿತು. ಈ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ರೈತರು ಕಳೆದ 6 ತಿಂಗಳಿನಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಕೇಂದ್ರ ಸರಕಾರ ಸ್ಪಂದಿಸುತ್ತಿಲ್ಲ ಆದ ಕಾರಣ ತಾವು ಹಾಗೂ ಸಂಸದರು ಕೇಂದ್ರ ಸರಕಾರಕ್ಕೆ ಒತ್ತಾಯ ಮಾಡಿ ಈ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸ ಬೇಕೆಂದು ಮನವಿಯಲ್ಲಿ ತಿಳಸಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಮಂಜುನಾಥ ಪೂಜೇರಿ,ಗೋಪಾಲ ಕುಕನೂರ,ಬಸ್ಸು ನಾಯಿಕ, ಸಿದ್ಲಿಂಗ ಪೂಜೇರಿ,ಸಿದ್ರಾಮ ಪೂಜೇರಿ ,ಇರ್ಫಾನ್ ಇನಾಮದಾರ ಉಪಸ್ಥಿತರಿದ್ದರು.

Related posts: