ಗೋಕಾಕ:ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ
ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 17 :
ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಅವಿರತವಾಗಿ ಶ್ರಮಿಸುತ್ತಿರುವ ಗೋಕಾಕ ಮತಕ್ಷೇತ್ರದ ಆಶಾ ಕಾರ್ಯಕರ್ತೆಯರಿಗೆ ಬೆಳಗಾವಿ ಸಂಸದೆ ಮಂಗಳಾ ಸುರೇಶ ಅಂಗಡಿ ಅವರು ನೀಡಿದ ಆಹಾರ ಕಿಟಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಗುರುವಾರದಂದು ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಶೃದ್ದಾ ಅಂಗಡಿ , ಜಿ.ಪಂ ಮಾಜಿ ಸದಸ್ಯರಾದ ಟಿ.ಆರ್.ಕಾಗಲ್ , ಮಡೆಪ್ಪ ತೋಳಿನವರ, ನಗರಾಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ ಭರಮನ್ನವರ,ಮುಖಂಡರುಗಳಾದ ಎಸ್.ವ್ಹಿ ದೇಮಶೆಟ್ಟಿ , ಬಸವರಾಜ ಹಿರೇಮಠ , ಸುರೇಶ ಸನದಿ, ಲಕ್ಕಪ್ಪ ತಹಶೀಲ್ದಾರ, ಚಿದಾನಂದ ದೇಮಶೆಟ್ಟಿ, ಸೇರಿದಂತೆ ಅನೇಕರು ಇದ್ದರು.