RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಪ್ರಕೃತಿ ವಿಕೋಪಗಳಿಂದ ರಕ್ಷಣೆ ಪಡೆಯಲು ಅರಣ್ಯವನ್ನು ಬೆಳಸಿ : ಶಾಸಕ ರಮೇಶ ಸಲಹೆ

ಗೋಕಾಕ:ಪ್ರಕೃತಿ ವಿಕೋಪಗಳಿಂದ ರಕ್ಷಣೆ ಪಡೆಯಲು ಅರಣ್ಯವನ್ನು ಬೆಳಸಿ : ಶಾಸಕ ರಮೇಶ ಸಲಹೆ 

ಪ್ರಕೃತಿ ವಿಕೋಪಗಳಿಂದ ರಕ್ಷಣೆ ಪಡೆಯಲು ಅರಣ್ಯವನ್ನು ಬೆಳಸಿ : ಶಾಸಕ ರಮೇಶ ಸಲಹೆ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 19 :

 
ಪ್ರಕೃತಿ ವಿಕೋಪಗಳಿಂದ ರಕ್ಷಣೆ ಪಡೆಯಲು ಅರಣ್ಯವನ್ನು ಬೆಳಸಬೇಕೆಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಸೋಮವಾರದಂದು ನಗರದ ಸರಕಾರಿ ಆಸ್ಪತ್ರೆ ಆವರಣದಲ್ಲಿ ಅರಣ್ಯ ಇಲಾಖೆಯವರು ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಾ ಪರಿಸರ ರಕ್ಷಣೆಯಿಂದ ಜನರ ಆರೋಗ್ಯವಂತ ಜೀವನ ಸಾಧ್ಯವಾಗಿದ್ದು, ಎಲ್ಲರೂ ಗಿಡ ಮರಗಳನ್ನು ಬೆಳೆಸುವ ಮೂಲಕ ಪರಿಸರ ರಕ್ಷಣೆಗೆ ಮುಂದಾಗುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಸದಸ್ಯರಾದ ಟಿ.ಆರ್.ಕಾಗಲ, ಮಡೆಪ್ಪ ತೋಳಿನವರ, ತಾಲೂಕಾ ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ಸಹಾಯಕ ಅರಣ್ಯ ಅಧಿಕಾರಿ ರಾಜೇಶ್ವರಿ ಈರನಟ್ಟಿ, ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ, ಉಪ ವಲಯ ಅರಣ್ಯ ಅಧಿಕಾರಿ ಎಚ್.ಎಸ್.ಇಂಗಳಗಿ , ಅರಣ್ಯ ರಕ್ಷಕ ಮಹಾದೇವ ಜಾಮುನಿ ಸೇರಿದಂತೆ ಅನೇಕರು ಇದ್ದರು

Related posts: