RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಶೈಕ್ಷಣಿಕ ಕೌಶಲಗಳನ್ನು ಅಭಿವೃದ್ಧಿ ಪಡೆಸಿಕೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿ : ಜಿ.ಬಿ.ಬಳಗಾರ ಅಭಿಮತ

ಗೋಕಾಕ:ಶೈಕ್ಷಣಿಕ ಕೌಶಲಗಳನ್ನು ಅಭಿವೃದ್ಧಿ ಪಡೆಸಿಕೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿ : ಜಿ.ಬಿ.ಬಳಗಾರ ಅಭಿಮತ 

ಶೈಕ್ಷಣಿಕ ಕೌಶಲಗಳನ್ನು ಅಭಿವೃದ್ಧಿ ಪಡೆಸಿಕೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿ : ಜಿ.ಬಿ.ಬಳಗಾರ ಅಭಿಮತ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 18 :

 
ಶೈಕ್ಷಣಿಕ ಕೌಶಲಗಳನ್ನು ಅಭಿವೃದ್ಧಿ ಪಡೆಸಿಕೊಂಡು ವಿದ್ಯಾರ್ಥಿಗಳ ಭವಿಷ್ಯನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು

ಶನವಿವಾರದಂದು ಚೆನ್ನಬಸವ ವಿದ್ಯಾಪೀಠ ನಗರದ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜಿನಲ್ಲಿ ಹಮ್ಮಿಕೊಂಡ ಶಿಕ್ಷಕರ ಕೌಶಲ್ಯ ತರಬೇತಿ ಕಾರ್ಯಗಾರ ಸಮಾರೋಪ ಸಮಾರಂಭದಲ್ಲಿ ಶಿಕ್ಷಕರಿಗೆ ಪ್ರಗತಿ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.
ಸಮಾಜ ಶಿಕ್ಷಕರಿಂದ ಬಯಸುವಷ್ಷು ಬೇರೆ ಯಾರಿಂದಲೂ ಬಯಸುವದಿಲ್ಲ, ಪಾಲಕರು ಆಶಾ ಭಾವನೆಯಿಂದ ಮಕ್ಕಳನ್ನು ವಿಧ್ಯಾಭ್ಯಾಸಕ್ಕೆ ಕಳಿಸಿರುತ್ತಾರೆ . ಅವರ ಆಶೆಗಳನ್ನು ಈಡೇರಿಸುವ ಬಹುದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ. ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ಶಿಕ್ಷಣ ರೀತಿ ಹಾಗೂ ನೀತಿ ಬದಲಾಗುತ್ತಿರುವ ಸಂದರ್ಭದಲ್ಲಿ ಅದಕ್ಕೆ ತಕ್ಕಂತೆ ಶಿಕ್ಷಕರು ಬದಲಾಗಬೇಕಾದ ಅವಶ್ಯಕತೆ ಇದೆ. ಶಿಕ್ಷಕರು ಕೊಡುವ ಮಾಹಿತಿಗಿಂತ ಗೂಗಲ್ ದಂತಹ ಸಾಮಾಜಿಕ ಜಾಲತಾಣಗಳು ನೀಡುತ್ತಿವೆ. ತಮ್ಮಗಾಗಿ ಅಲ್ಲದಿದ್ದರು ಸಹ ವಿದ್ಯಾರ್ಥಿಗಳಿಗಾಗಿ ನಾವು ಅಪ್ಡೇಟ್ ಆಗಿ ಮಕ್ಕಳ ಭವಿಷ್ಯ ರೂಪಿಸಬೇಕಾಗಿದೆ. ಇಂದಿನ ಯುಗದಲ್ಲಿ ಶಿಕ್ಷಕ ವೃತ್ತಿ ಬಹಳಷ್ಟು ಸವಾಲಿನಿಂದ ಕೂಡಿದೆ. ಅದಕ್ಕೆ ಪೂರಕವಾಗಿ ನಾವೆಲ್ಲರೂ ಬದಲಾವಣೆ ಆಗಿ ಹೊಸ ಶಿಕ್ಷಣ ನೀತಿಗೆ ಹೊಂದಿಕೊಂಡು ಹೊಸ ಬೋಧನಾ ಕೌಶಲ್ಯಗಳೊಂದಿಗೆ ನಾವು ವಿದ್ಯಾರ್ಥಿಗಳಿಗೆ ಬೇಕಾದದ್ದನ್ನು ನೀಡಬೇಕು. ಪೈಪೋಟಿಯಿಂದ ಕೂಡಿರುವ ಯುಗದಲ್ಲಿ ಶಿಕ್ಷಕರು ತಮ್ಮ ವಿದ್ಯಾರ್ಥಿಗಳನ್ನು ತಯಾರು ಮಾಡಬೇಕಾಗಿದೆ. ಆ ದಿಸೆಯಲ್ಲಿ ಶಿಕ್ಷಕರು ಮುಂದಾಗಬೇಕು ಎಂದು ಹೇಳಿದರು.
ಕಾರ್ಯಗಾರದಲ್ಲಿ ತರಬೇತಿ ನೀಡಲು ಆಗಮಿಸಿದ್ದ ಸಮೂಹ ಸಂಪನ್ಮೂಲ ವ್ಯಕ್ತಿ ಆರೋಗ್ಯಸ್ವಾಮಿ ಎ.ಕೆ ಅವರು ಸಿದ್ದಲಿಂಗೇಶ್ವರ ಬಿಸಿಎ ಕಾಲೇಜಿನ ಉಪನ್ಯಾಸಕರಿಗೆ ಹೊಸ ಶಿಕ್ಷಣ ನೀತಿಯ ಕುರಿತು ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಅಡಿವೇಶ ಗವಿಮಠ, ಪ್ರಾಚಾರ್ಯ ಜಗದೀಶ ಮುತನಾಳ ಉಪಸ್ಥಿತರಿದ್ದರು.

Related posts: