ಗೋಕಾಕ:ಜನತೆ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು : ಶಾಸಕ ರಮೇಶ ಜಾರಕಿಹೊಳಿ
ಜನತೆ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು : ಶಾಸಕ ರಮೇಶ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 5 :
ಜನತೆ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಿ ಗಾಂಧೀಜಿ ಅವರ ಸ್ವಚ್ಛ ಭಾರತದ ಕನಸುನ್ನು ನನಸಾಗಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು
ಮಂಗಳವಾರದಂದು ನಗರದ ಶಾಸಕರ ಕಾರ್ಯಾಲದ ಆವರಣದಲ್ಲಿ ಸ್ವಚ್ಛ ಭಾರತ ಮಿಶನ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರಕಾರ ಹಾಗೂ ನಗರಸಭೆಯ ಸಂಯುಕ್ತಾಶಯದಲ್ಲಿ ಪ್ರತಿ ಮನೆಗೆ 2 ಡಸ್ಟಬೀನಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಗರದ ಜನತೆ ನಗರವನ್ನು ಸ್ವಚ್ಛವಾಗಿಡಲು ನಗರಸಭೆಯ ಸಿಬ್ಬಂದಿಯೊಂದಿಗೆ ಸಹಕರಿಸಿ ಅವರ ಮಾರ್ಗದರ್ಶನದಂತೆ ಒಣ ಮತ್ತು ಹಸಿ ಕಸವನ್ನು ವಿಂಗಡಿಸಿ ನೀಡಬೇಕು. ಸ್ವಚ್ಛತೆಯಿಂದ ಆರೋಗ್ಯ ರಕ್ಷಣೆಯೊಂದಿಗೆ ನಗರ ಸೌಂದರ್ಯವನ್ನು ರಕ್ಷಿಸಲು ಮುಂದಾಗುವಂತೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿಗಳ ಉಜ್ವಲ ಯೋಜನೆಯಡಿ ಅಡುಗೆ ಅನಿಲಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ, ಪರಿಸರ ಅಭಿಯಂತ ಎಂ.ಎಚ್.ಗಜಾಕೋಶ, ಆರೋಗ್ಯ ನಿರೀಕ್ಷಕ ಜೆ.ಸಿ.ತಾಂಬೂಳೆ, ನಗರಸಭೆ ಸದಸ್ಯರು, ಮುಖಂಡರು ಇದ್ದರು.