ಗೋಕಾಕ:ಪಿಎಂ ಕೇರ್ಸ ಅಡಿಯಲ್ಲಿ ಸ್ಥಾಪಿಸಲಾಗಿರುವ ಪಿಎಸ್ಎ ಆಕ್ಸಿಜನ್ ಘಟಕವನ್ನು ಲೋಕಾರ್ಪಣೆ ಗೋಳಿಸಿದ ಎಂಪಿ ಈರಣ್ಣಾ ಕಡಾಡಿ
ಪಿಎಂ ಕೇರ್ಸ ಅಡಿಯಲ್ಲಿ ಸ್ಥಾಪಿಸಲಾಗಿರುವ ಪಿಎಸ್ಎ ಆಕ್ಸಿಜನ್ ಘಟಕವನ್ನು ಲೋಕಾರ್ಪಣೆ ಗೋಳಿಸಿದ ಎಂಪಿ ಈರಣ್ಣಾ ಕಡಾಡಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 7 :
ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಪಿಎಂ ಕೇರ್ಸ ಅಡಿಯಲ್ಲಿ ಸ್ಥಾಪಿಸಲಾಗಿರುವ ಪಿಎಸ್ಎ ಆಕ್ಸಿಜನ್ ಘಟಕವನ್ನು ಗುರುವಾರದಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಲೋಕಾರ್ಪಣೆ ಗೋಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಿಎಂ ಕೇರ ಅಡಿಯಲ್ಲಿ ಇಲ್ಲಿಯವರೆಗೆ ದೇಶಾದ್ಯಂತ ಒಟ್ಟು 1224 ಪಿಎಸ್ಎ ಆಕ್ಸಿಜನ್ ಪ್ಲಾಂಟಗಳಿಗೆ ಧನಸಹಾಯ ನೀಡಲಾಗಿದ್ದು, ಅದರಲ್ಲಿ 1100 ಕ್ಕೂ ಹೆಚ್ಚು ಘಟಕಗಳನ್ನು ನಿಯೋಜಿಸಲಾಗಿದ್ದು, ಆಮ್ಲಜನಕ ಉತ್ಪಾದನೆಯಾಗುತ್ತಿದೆ.
ಕೊವಿಡ -19 ಸಾಂಕ್ರಾಮಿಕದ ಬಳಿಕ ಭಾರತದ ವೈದ್ಯಕೀಯ ಆಮ್ಲಜನಕ ಉತ್ಪಾದನೆ ಸಾಮರ್ಥ್ಯವನ್ನು ಹೆಚ್ಚಿಸಲು ಸರಕಾರ ಕೈಗೊಂಡಿರುವ ಪೂರ್ವಭಾವಿ ಕ್ರಮಗಳಿಗೆ ಈ ಘಟಕಗಳು ಸಾಕ್ಷೀಯಾಗಿವೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಕೊರೋನಾ ಹರಡದಂತೆ ಜಾಗೃತಿ ವಹಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ಪೌರಾಯುಕ್ತ ಶಿವಾನಂದ ಹಿರೇಮಠ ,ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ತಾಲೂಕು ವೈದ್ಯಾಧಿಕಾರಿ ಡಾ.ಎಂ.ಎಸ್.ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ಹಿರಿಯ ವೈದ್ಯ ಡಾ.ಆರ್.ಎಸ್.ಬೆನಚಿನಮರಡಿ, ಡಾ.ಬಾಗಲಕೋಟ ಸೇರಿದಂತೆ ನಗರಸಭೆ ಸದಸ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು