ಗೋಕಾಕ:ಕಾನೂನಿನಲ್ಲಿ ಅವಕಾಶ ಇದ್ದರೆ ಹಿಲ್ ಗಾರ್ಡನಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಿ ಚುನಾವಣೆ : ಮಾಜಿ ಸಚಿವ ರಮೇಶ
ಕಾನೂನಿನಲ್ಲಿ ಅವಕಾಶ ಇದ್ದರೆ ಹಿಲ್ ಗಾರ್ಡನಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಿ ಚುನಾವಣೆ : ಮಾಜಿ ಸಚಿವ ರಮೇಶ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 10 :
ಕಾನೂನಿನಲ್ಲಿ ಅವಕಾಶ ಇದ್ದರೆ ಮುಂದಿನ ಸಾರಿ ಹಿಲಗಾರ್ಡನದಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಿ ಚುನಾವಣೆ ಮಾಡೋಣ. ಸತೀಶ ಜಾರಕಿಹೊಳಿ ಹತಾಶೆಯಾಗಿ ಮಾತನಾಡುತ್ತಿದ್ದಾರೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿರುಗೇಟು ನೀಡಿದರು
ಶುಕ್ರವಾರದಂದು ಪರಿಷತ್ ಚುನಾವಣೆ ಸಂಬಂಧ ನಗರದ ನಗರಸಭೆಯಲ್ಲಿ ಸ್ಥಾಪಿಸಲಾದ ಮತಗಟ್ಟೆ ಸಂಖ್ಯೆ 261 ರಲ್ಲಿ ಮತದಾನ ಮಾಡಿ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷಕ್ಕೆ ನೆಲೆ ಇಲ್ಲಾ ದೇಶದ ಪಂಜಾಬ ಸೇರಿದಂತೆ ಕೆಲವು ಕಡೆ ಮಾತ್ರ ಉಸಿರಾಡುತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ನಿರ್ಣಾಮವಾಗಲಿದೆ. ಇದರಿಂದ ಹತಾಶೆಯಾಗಿ ಕಾಂಗ್ರೆಸ್ ನಾಯಕರು ಮತನಾಡುತ್ತಿದ್ದಾರೆ.
ನಾನು ಬಿಜೆಪಿ ಪಕ್ಷದ ಶಾಸಕ ನಮ್ಮ ಪ್ರಥಮ ಆದ್ಯತೆ ಬಿಜೆಪಿ ಗೆಲ್ಲಬೇಕು ಮತ್ತು ಕಾಂಗ್ರೆಸ್ ಸೋಲಬೇಕು. ಡೇ ಒನ ದಿಂದ ನಾವು ಇದನ್ನೇ ಹೇಳುತ್ತಾ ಬಂದಿದ್ದೇನೆ ಆ ಪ್ರಕಾರ ಕೆಲಸ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸುಮಾರು 300ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಯ ಚುನಾಯಿತ ಪ್ರತಿನಿಧಿಗಳು ನನಗೆ ಪೋನ ಮಾಡಿ ತಮ್ಮ ಬೆಂಬಲ ಸೂಚಿಸುವದಾಗಿ ತಿಳಿಸಿದ್ದಾರೆ. ಜಿಲ್ಲಾದ್ಯಂತ ಒಳ್ಳೆಯ ವಾತಾವರಣ ಇದೆ . ನಮ್ಮ ಪಕ್ಷದ ಅಭ್ಯರ್ಥಿ ಪ್ರಥಮ ಸುತ್ತಿನಲ್ಲಿಯೇ ಗೆಲುವು ಸಾಧಿಸುತ್ತಾರೆ ಮತ್ತು ಕಾಂಗ್ರೆಸ್ ಸೋಲುತ್ತದೆ ಎಂದು ಹೇಳಿದರು.
ದುಡ್ಡಿನ ಮೇಲೆ ಚುನಾವಣೆ ನಡೆಯುತ್ತಿದೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಅದೆಲ್ಲಾ ಸುಳ್ಳು ದುಡ್ಡಿನ ಮೇಲೆ ರಾಜಕಾರಣ ಮಾಡಲು ಆಗೋದಿಲ್ಲ, ಅದು ಮುರ್ಖತನ ಅದೇನಿದ್ದರೂ ಒಂದು ಭಾಗವಷ್ಟೆ ಎಂದರು.