ಗೋಕಾಕ:ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೋಳುದರಿಂದ ನೆಮ್ಮದಿ ದೊರೆಯುತ್ತದೆ : ವಿ.ಪ ಸದಸ್ಯ ಲಖನ ಜಾರಕಿಹೊಳಿ
ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೋಳುದರಿಂದ ನೆಮ್ಮದಿ ದೊರೆಯುತ್ತದೆ : ವಿ.ಪ ಸದಸ್ಯ ಲಖನ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 18 :
ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೋಳುದರಿಂದ ದೇವರ ಅನುಗ್ರಹದೊಂದಿಗೆ ಮಾನಸಿಕ ನೆಮ್ಮದಿ ದೊರೆಯುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಹೇಳಿದರು.
ಶುಕ್ರವಾರದಂದು ಇಲ್ಲಿನ ಭಾಗ್ಯ ನಗರದ ಶ್ರೀ ಕರೆಮ್ಮಾದೇವಿ ಕಾರ್ತಿಕೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಾ ಹಬ್ಬಗಳು ಉತ್ಸವಗಳಲ್ಲಿ ಭಾಗವ಼ಹಿಸುವದರಿಂದ ಪರಸ್ಪರರಲ್ಲಿ ಪ್ರೀತಿ ವಿಶ್ವಾಸ ವೃದ್ದಿಸುವದರೊಂದಿಗೆ ಶಾಂತಿಯುತ ಸಮಾಜ ನಿರ್ಮಾಣವಾಗುತ್ತದೆ. ಎಲ್ಲರೂ ಸಂಘಟಿತರಾಗಿ ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೋಳುವಂತೆ ಕರೆ ನೀಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ವಹಿಸಿದ್ದರು.
ವೇದಿಕೆಯಲ್ಲಿ ಬ್ರಹ್ಮಾನಂದ ಸ್ವಾಮೀಜಿ, ನಗರಸಭೆ ಉಪಾಧ್ಯಕ್ಷ ಬಸವರಾಜ ಆರೆನ್ನವರ , ಪೌರಾಯುಕ್ತ ಶಿವಾನಂದ ಹಿರೇಮಠ, ಕಮಿಟಿಯ ಅಧ್ಯಕ್ಷ ಎಸ್.ಆರ್.ನಲವಡೆ, ಬಸವರಾಜ ಕುಬಸದ, ರವಿ ಉಪ್ಪಿನ, ದಶರಥ ಕೊಪ್ಪದ ಇದ್ದರು.