RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಆಗ್ರಹಿ ನಗರದಲ್ಲಿ ಬೃಹತ್ ಪ್ರತಿಭಟನೆ

ಗೋಕಾಕ:ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಆಗ್ರಹಿ ನಗರದಲ್ಲಿ ಬೃಹತ್ ಪ್ರತಿಭಟನೆ 

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಆಗ್ರಹಿ ನಗರದಲ್ಲಿ ಬೃಹತ್ ಪ್ರತಿಭಟನೆ

 

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 4 :

 

ಕರ್ನಾಟಕ ರಾಜ್ಯ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟ , ವಿಭಾಗೀಯ ಘಟಕ ಬೆಳಗಾವಿ ಹಾಗೂ ತಾಲೂಕು ಘಟಕ ಗೋಕಾಕ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿ ಮಂಗಳವಾರದಂದು ನಗರದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಬಸವೇಶ್ವರ ವೃತ್ತದಲ್ಲಿ ಮಾನವ ಸರ್ಪಳಿ ನಿರ್ಮಿಸಿ ಕೆಲ ಕಾಲ ರಸ್ತೆ ತಡೆ ನಡೆಸಿ ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಮನವಿ ಅರ್ಪಿ‌ಸಿದರು.

ಅತಿಥಿ ಉಪನ್ಯಾಸಕರನ್ನು ಕಾಯಂ ಗೋಳಿಸಬೇಕು. ಕಾಯಂ ಉಪನ್ಯಾಸಕರಿಗೆ ಸರಕಾರ ನೀಡುವ ವೇತನವನ್ನು ಅತಿಥಿ ಉಪನ್ಯಾಸಕರಿಗೂ ಸಹ ನೀಡಿ ಉದ್ಯೋಗ ಭದ್ರತೆಯನ್ನು ಕಲ್ಪಿಸಬೇಕು, ಇವುಗಳನ್ನು ಉನ್ನತ ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹಿಸಿ ತರಗತಿಗಳನ್ನು ಬಹಿಷ್ಕರಿಸಿ ರಾಜ್ಯಾದ್ಯಂತ ಅನಿರ್ಧಾಷ್ಠವಧಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ. ಸರಕಾರ ನಮ್ಮ ಬೇಡಿಕೆಗಳನ್ನು ಸಹನಾಭೂತಿಯಿಂದ ಆಲಿಸಿ ಮುಂದಿನ ಕ್ರಮ ಕೈಗೋಳ್ಳುವಂತೆ ಮನವಿಯಲ್ಲಿ ವಿನಂತಿಸಲಾಗಿದೆ.

ಪ್ರತಿಭಟನೆಯಲ್ಲಿ ನಗರದ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು, ಕಪರಟ್ಟಿ ಕಳ್ಳಿಗುದ್ದಿ ಮಠದ ಶ್ರೀ ಬಸವರಾಜ ಹಿರೇಮಠ ಹಾಗೂ ಸಂಘಟನೆಯ ವ್ಹಿ.ಸಿ ಹುಣಚ್ಯಾಳ, ಎಸ್.ಎಸ್.ಗಾಣಿಗೇರ, ಡಾ.ಮಕ್ತುಂಹುಸೇನ ನದಾಫ, ,ವಾಯ.ಬಿ.ಕೊಪ್ಪದ, ಭೂಮನ್ನವರ, ಸಂಗರಾಜ ಕೊಪ್ಪ ಸೇರಿದಂತೆ ಗೋಕಾಕ , ಮೂಡಲಗಿ,ಪಾಶ್ಚಾಪೂರ, ಹುಕ್ಕೇರಿಯ ಅತಿಥಿ ಉಪನ್ಯಾಸಕರು ಪಾಲ್ಗೊಂಡಿದ್ದರು.

Related posts: