RNI NO. KARKAN/2006/27779|Tuesday, May 19, 2026
You are here: Home » breaking news » ಗೋಕಾಕ:ಪಿಎಸ್ಐ ಹುದ್ದೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅಭಿನಂದನೆ

ಗೋಕಾಕ:ಪಿಎಸ್ಐ ಹುದ್ದೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅಭಿನಂದನೆ 

ಪಿಎಸ್ಐ ಹುದ್ದೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅಭಿನಂದನೆ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 23 :

 
ಪಿಎಸ್ಐ ಹುದ್ದೆಗೆ ಆಯ್ಕೆಯಾಗಿರುವ ಗೋಕಾಕ ಮತಕ್ಷೇತ್ರದ ಘಟಪ್ರಭಾ , ಶಿವಾಪೂರ ಹಾಗೂ ಮಮದಾಪೂರ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶಾಸಕ ರಮೇಶ ಜಾರಕಿಹೊಳಿ ಅಭಿನಂದಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಗೋಕಾಕ ಮತಕ್ಷೇತ್ರದಲ್ಲಿ ಶೈಕ್ಷಣಿಕವಾಗಿ ಹಲವಾರು ರಚನಾತ್ಮಕ ಕಾರ್ಯಕ್ರಗಳನ್ನು ಆಯೋಜಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದು ಘಟಪ್ರಭಾದ ಕುಮಾರಿ ಚೈತ್ರಾ ಹನಮಂತ ಗಿಡ್ಡೂರ, ಶಿವಾಪೂರದ ಕಿರಣ ಬಸಗೌಡ ಪಾಟೀಲ ಹಾಗೂ ಮಮದಾಪೂರ ಗ್ರಾಮದ ಕುಮಾರಿ ಕೀರ್ತಿ ನಿಂಗಪ್ಪ ಕಮತ ಅವರು ಪಿಎಸ್ಐ ಹುದ್ದೆಗೆ ಆಯ್ಕೆಯಾಗಿ ಗೋಕಾಕ ಮತಕ್ಷೇತ್ರದ ಕೀರ್ತಿ ಹೆಚ್ಚಿಸಿದ್ದಾರೆ. ಇವರ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಶಾಸಕ ರಮೇಶ ಜಾರಕಿಹೊಳಿ ಅವರು ಶುಭ ಹಾರೈಸಿದ್ದಾರೆ.

Related posts: