RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ನಾಡೋಜ ಚೆನ್ನವೀರ ಕಣವಿ ಅವರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ:ನಾಡೋಜ ಚೆನ್ನವೀರ ಕಣವಿ ಅವರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ 

ನಾಡೋಜ ಚೆನ್ನವೀರ ಕಣವಿ ಅವರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 16 :

 

ಕನ್ನಡ ಸಾರಸ್ವತ ಲೋಕದ ದಿಗ್ಗಜ ಸಾಹಿತಿ, ನಾಡೋಜ ಡಾ. ಚೆನ್ನವೀರ ಕಣವಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಡಾ. ಚೆನ್ನವೀರ ಕಣವಿ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ. ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದ ಕಣವಿ ಅವರು ಹೊಸಗನ್ನಡ ಕಾವ್ಯದ ಪ್ರಮುಖ ಕವಿಯಾಗಿದ್ದರು ಎಂದು ತಿಳಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಕಣವಿ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ದಯಪಾಲಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Related posts: